Featured

ಕುಂದಾಪುರ: ಈ ಬಾರಿ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ ,  ಗೆದ್ದು ಮೋದಿ ಕೈ ಬಲ ಪಡಿಸುತ್ತೇನೆ :  ಈಶ್ವರಪ್ಪ – Vishwanews24

ಅಪ್ಪ ಮಕ್ಕಳ ಹಿಡಿತದಲ್ಲಿ ಬಿಜೆಪಿ ಇದೆ ಇದರ ವಿರುದ್ಧ ಹೋರಾಟ ಮಾಡಲು ಚುನಾವಣೆಗೆ ಸ್ಪರ್ಧೆ  ಮಾಡುತ್ತಿದ್ದೇನೆ : ಈಶ್ವರಪ್ಪ ಅಸಮಧಾನ

ಕುಂದಾಪುರ:  ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಕ್ಷೇತ್ರದ ಎಲ್ಲಾ ಕಡೆ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದೇನೆ ಶ್ರೀ ಸಾಮಾನ್ಯ ನನಗೆ ಬೆಂಬಲವಾಗಿ ನಿಂತಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಜೆಡಿಎಸ್ ಪಕ್ಷದ ಕಾರ್ಯಕರ್ತರು ಬೆಂಬಲ ಕೊಡುವುದಾಗಿ ತೀರ್ಮಾನಿಸಿದಾಗ ಅವರ ಪಕ್ಷದವರು ಪ್ರಶ್ನೆ ಮಾಡಿದ್ದಾರೆ. ನಾವು ಈಶ್ವರಪ್ಪ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ. ಈ ಚುನಾವಣೆಯಲ್ಲಿ ಗೆದ್ದು ಮೋದಿ ಕೈ ಬಲಪಡಿಸುತ್ತೇನೆ ಎಂದು ಸುದ್ದಿಗೋಷ್ಟಿಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಈಶ್ವರಪ್ಪ ಹೇಳಿದ್ದಾರೆ.

ಕುಂದಾಪುರದಲ್ಲಿ ಮಾತನಾಡಿದ ಅವರು, “ರಾಜ್ಯದ ಹಿಂದುತ್ವದ ಹೋರಾಟಗಾರರು ಹಿರಿಯರು ನನ್ನ ಜೊತೆ ಇರುವುದಾಗಿ ಹೇಳಿ ಆಶೀರ್ವಾದ ಮಾಡಿದ್ದಾರೆ. ಎಲ್ಲಾ ನೊಂದ ಕಾರ್ಯಕರ್ತರು ನನಗೆ ಬೆಂಬಲವಾಗಿದ್ದಾರೆ ಇಷ್ಟೆಲ್ಲಾ ಬೆಂಬಲ ಪಡೆದಿರುವ ನಾನು ಈ ಬಾರಿ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ. ರಾಜ್ಯದಲ್ಲಿ ಹಿಂದುತ್ವದ ಹೋರಾಟಗಾರರಾದ ಸಿ.ಟಿ.ರವಿ, ಪ್ರತಾಪ್ ಸಿಂಹ, ಬಸವನ ಗೌಡ ಪಾಟೀಲ್ ಯತ್ನಾಳ್ ರನ್ನು ಮೂಲೆಗೆ ಸೇರಿಸಲಾಗಿದೆ ಇದರ ಜೊತೆಗೆ ಕಾರ್ಯಕರ್ತರು ನೊಂದಿದ್ದಾರೆ ಎಲ್ಲಾ ಅಂಶಗಳನ್ನು ಅಮಿತ್ ಶಾ ಅವರಿಗೆ ಫೋನ್ ಮೂಲಕ ತಿಳಿಸಿದೆ ಅವರು ದೆಹಲಿಗೆ ಮಾತನಾಡಲು ಕರೆದರು ನಾನು ಹಿರಿಯರ ಮಾತಿಗೆ ಗೌರವ ಕೊಟ್ಟು ಹೋದೆ. ಭೇಟಿಯಾಗದೆ ಇರವುದಕ್ಕೆ ಕಾರಣ ನನ್ನ ಮೇಲಿನ ಅಸಮಾಧಾನವಲ್ಲ ಬಹುಶಃ ಮೋದಿ ಅಮಿತ್ ಶಾ ಚರ್ಚಿಸಿ ಈಶ್ವರಪ್ಪ ಚುನಾವಣೆಯಲ್ಲಿ ನಿಂತು ಗೆದ್ದು ಬರಲಿ ಎಂದು ತೀರ್ಮಾನಿಸಿರಬಹುದು ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದರು.

“ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಆರಂಭಿಸಿದಾಗ ಯಡಿಯೂರಪ್ಪ ದೆಹಲಿಗೆ ತೆರಳಿ ಅಮಿತ್ ಶಾ ಬಳಿ ದೂರು ನೀಡಿದರು. ನನಗೆ ದೆಹಲಿಗೆ ಕರೆಸಿದರು ನಾನು ಹೋಗಿದ್ದೆ ಅಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಿತು‌‌ ನಾನು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಲ್ಲಿ ಹಿಂದುಳಿದ ವರ್ಗದವರು ಇದ್ದಾರೆ ನಿಮಗೆ ಹಿಂದುಳಿದ ವರ್ಗದವರು ಬೇಡವಾ ಎಂದು ಪ್ರಶ್ನೆ ಮಾಡಿದೆ ಯಡಿಯೂರಪ್ಪ ಯಾವುದೇ ಕಾರಣಕ್ಕೂ ಒಪ್ಪಲಿಲ್ಲ ಅಮಿತ್ ಶಾ ನಿಲ್ಲಿಸಲು ಸೂಚಿಸಿದರು. ನಾನು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಿದೆ. ಕಳೆದ ಚುನಾವಣೆಯಲ್ಲಿ ಚುನಾವಣೆ ಯಿಂದ ಹಿಂದೆ ಸರಿಯಲು ಹೇಳಿದರು ತಕ್ಷಣ ಕೇಂದ್ರದವರಿಗೆ ಪತ್ರ ಬರೆದು ಹಿಂದೆ ಸರಿದೆ. ಕಾಂತೇಶ್ ಗೆ ಹಾವೇರಿಯಲ್ಲಿ ಟಿಕೆಟ್ ಕೊಡುವುದಾಗಿ ಹೇಳಿ ನಂಬಿಸಿ ಮೋಸ ಮಾಡಿದರು ಅಪ್ಪ ಮಕ್ಕಳ ಹಿಡಿತದಲ್ಲಿ ಬಿಜೆಪಿ ಇದೆ ಇದರ ವಿರುದ್ಧ ಹೋರಾಟ ಮಾಡಲು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ತಮ್ಮ ಅಸಮಧಾನ ವ್ಯಕ್ತಪಡಿಸಿದರು.

“ಮೋದಿ ಫೋಟೊ ಯಾರಪ್ಪಂದು ರಾಘವೇಂದ್ರ ಒಬ್ಬನಿಗೆ ಮೋದಿ ಸೀಮಿತ ಆಗಿದ್ದಾರೆಯೇ? ಕೋರ್ಟ್ ಗೆ ಹೋಗಲಿ ನೋಡೋಣ ಏನು ತೀರ್ಮಾನ ಆಗುತ್ತದೆ ಎಂದು ನೋಡೋಣ..ಯಡಿಯೂರಪ್ಪ ಸುಳ್ಳು ಹೇಳಿ ಮೋಸ ಮಾಡಿದ್ದಾರೆ. ಹಿಂದುತ್ವದ ಹೋರಾಟಗಾರರು ಎಲ್ಲಿದ್ದಾರೋ ಅದೆಲ್ಲಾ ನನ್ನ ಕರ್ಮಭೂಮಿ. ಹಿಂದುತ್ವದಕ್ಕಾಗಿ ನೊಂದ ಕಾರ್ಯಕರ್ತರಿಗಾಗಿ ಕುಟುಂಬ ರಾಜಕಾರಣ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ ಗೆದ್ದೇ ಗೆಲ್ಲುತ್ತೇನೆ.ಸಿದ್ದಾಂತ ಇದ್ದ ಪಕ್ಷ ಒಂದು ಕುಟುಂಬದ ಹಿಡಿತಕ್ಕೆ ಹೋಗುತ್ತಿದೆ. ಸಿದ್ದಾಂತದ ಉಳಿವಿಗಾಗಿ ಕುಟುಂಬದ ಕೈಯಲ್ಲಿ ಇರುವ ಪಕ್ಷ ಶುದ್ಧ ಮಾಡಲು ಸ್ಪರ್ಧೆ ಮಾಡುತ್ತಿದ್ದೇನೆ. ಕೆಜೆಪಿ ಪಕ್ಷ ಕಟ್ಟಿದಾಗ ನಾನು ಯಡಿಯೂರಪ್ಪರವರಿಗೆ ಸಲಹೆ ನೀಡಿದೆ ಬೇರೆ ಪಕ್ಷ ಕಟ್ಟಬೇಡಿ ಎಂದು ನನಗೆ ಯಾರ ಸಲಹೆ ಬೇಡ ಎಂದು ಕೆಜೆಪಿ ಕಟ್ಟಿದರು ಎಷ್ಟು ಸೀಟು ಗೆದ್ದರು. ನಮ್ಮ ಕೈ ಕಾಲು ಹಿಡಿದು ಮತ್ತೆ ಪಕ್ಷಕ್ಕೆ ಬಂದರು. ಮುಂದೆ ಹೊಸ ಯಡಿಯೂರಪ್ಪ ನೋಡುತ್ತೀರಿ ಎಂದು ಹೇಳಿದ್ದರು ಇವರೆನಾ ಹೊಸ ಯಡಿಯೂರಪ್ಪ. ಕೇಂದ್ರದವರಿಗೆ ಮಂಕು ಬೂದಿ ಎರಚಲಾಗಿದೆ ಇದನ್ನ ಸರಿ ಪಡಿಸಲು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಬ್ರಹ್ಮ ಬಂದರೂ ಸ್ಪರ್ಧೆ ಯಿಂದ ಹಿಂದೆ ಸರಿಯಲ್ಲ ಸ್ಪರ್ಧೆ ಮಾಡಿ ಗೆದ್ದು ಮೋದಿ ಕೈ ಬಲ ಪಡಿಸುತ್ತೇನೆ” ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago