Featured

ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ :  ಗೀತಾ ಶಿವರಾಜ್‌ ಕುಮಾರ್‌ – Vishwanews24

ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ :  ಗೀತಾ ಶಿವರಾಜ್‌ ಕುಮಾರ್‌

ಕುಂದಾಪುರ‍: ರಾಜ್ಯದ ಮಾಜೀ ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರು ಜನಪರ ಕಾಳಜಿಯಿಂದ ಹೆಸರು ಪಡೆದವರು. ರಾಜಕೀಯವನ್ನು ಯಾವತ್ತೂ ಸ್ವಾರ್ಥಕ್ಕೆ ಬಳಸಿಕೊಳ್ಳದ ಬಂಗಾರಪ್ಪ ಜನಪರ ಕೊಡುಗೆಗಳನ್ನು ರಾಜ್ಯದ ಜನತೆಗೆ ನೀಡಿದವರು. ಉಚಿತ ಕೃಷಿ ಪಂಪ್ ಸೆಟ್ ಗಳ ಮೂಲಕ ರಾಜ್ಯದ ರೈತರ ಕಣ್ಣೊರೆಸಿದವರು. ಜನಾಶೀರ್ವಾದ ನನಗೆ ದೊರಕಿದರೆ ಅಪ್ಪನ ಹಾದಿಯಲ್ಲೇ ನಡೆಯುವೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹೇಳಿದರು.

ಅವರು ಗುರುವಾರ ನೆಂಪುವಿನಲ್ಲಿ ಮಾಜೀ ಶಾಸಕ ಬಿ.ಎಂ.ಸುಕುಮಾರ ಶೆಟ್ಟರ ನಿವಾಸದಲ್ಲಿ ಕರೆಯಲಾದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ನನಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಹೊಸತಲ್ಲ. ಈ ಹಿಂದೆಯೂ ನಾನು ಲೋಕಸಭೆಗೆ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ನಾನು ಅಧಿಕಾರ ಇಲ್ಲದೇ ಇದ್ದರೂ ಸಾಕಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ. ಜನರ ನಂಬಿಕೆಯನ್ನು ನಾನು ಉಳಿಸಿಕೊಳ್ಳುವೆ ಎಂದರು.

ನಟ ಶಿವರಾಜ್ ಕುಮಾರ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಶೇ 80 ರಷ್ಟು ತೊಡಗಿಸಿಕೊಳ್ಳುತ್ತೇನೆ. ಮತದಾರರು ಗೀತಾ ಕೈ ಹಿಡಿದರೆ ಬಂಗಾರಪ್ಪನವರ ರಾಜಕೀಯ ಪಾರದರ್ಶಕತೆ ಮತ್ತೆ ವಿಜೃಂಭಿಸಲಿದೆ ಎಂದರು. ಸಚಿವ ಮಧು ಬಂಗಾರಪ್ಪ ಕೂಡಾ ಉತ್ತಮ ರಾಜಕಾರಣಿಯಾಗಿದ್ದು ಜನಸ್ನೇಹಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಉತ್ತಮ ನಾಯಕರನ್ನು ಹೊಂದಲು ಈ ಚುನಾವಣೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ಭಾವಿಸುತ್ತೇನೆ ಎಂದರು.

ಬೈಂದೂರು ಮಾಜೀ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ, ಬೇಳೂರು ಶಾಸಕ ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಕೆಪಿಸಿಸಿ ಸದಸ್ಯ ಪ್ರಕಾಶ್ ಶೆಟ್ಟಿ, ಕೆಪಿಸಿಸಿ ವಕ್ತಾರ ಅನಿಲ್, ಸಂಜೀವ ಶೆಟ್ಟಿ ಸಂಪಿಗೇಡಿ, ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

18 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago