ಕುಂದಾಪುರ: ರಾಜ್ಯದ ಮಾಜೀ ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರು ಜನಪರ ಕಾಳಜಿಯಿಂದ ಹೆಸರು ಪಡೆದವರು. ರಾಜಕೀಯವನ್ನು ಯಾವತ್ತೂ ಸ್ವಾರ್ಥಕ್ಕೆ ಬಳಸಿಕೊಳ್ಳದ ಬಂಗಾರಪ್ಪ ಜನಪರ ಕೊಡುಗೆಗಳನ್ನು ರಾಜ್ಯದ ಜನತೆಗೆ ನೀಡಿದವರು. ಉಚಿತ ಕೃಷಿ ಪಂಪ್ ಸೆಟ್ ಗಳ ಮೂಲಕ ರಾಜ್ಯದ ರೈತರ ಕಣ್ಣೊರೆಸಿದವರು. ಜನಾಶೀರ್ವಾದ ನನಗೆ ದೊರಕಿದರೆ ಅಪ್ಪನ ಹಾದಿಯಲ್ಲೇ ನಡೆಯುವೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹೇಳಿದರು.
ಅವರು ಗುರುವಾರ ನೆಂಪುವಿನಲ್ಲಿ ಮಾಜೀ ಶಾಸಕ ಬಿ.ಎಂ.ಸುಕುಮಾರ ಶೆಟ್ಟರ ನಿವಾಸದಲ್ಲಿ ಕರೆಯಲಾದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ನನಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಹೊಸತಲ್ಲ. ಈ ಹಿಂದೆಯೂ ನಾನು ಲೋಕಸಭೆಗೆ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ನಾನು ಅಧಿಕಾರ ಇಲ್ಲದೇ ಇದ್ದರೂ ಸಾಕಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ. ಜನರ ನಂಬಿಕೆಯನ್ನು ನಾನು ಉಳಿಸಿಕೊಳ್ಳುವೆ ಎಂದರು.
ನಟ ಶಿವರಾಜ್ ಕುಮಾರ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಶೇ 80 ರಷ್ಟು ತೊಡಗಿಸಿಕೊಳ್ಳುತ್ತೇನೆ. ಮತದಾರರು ಗೀತಾ ಕೈ ಹಿಡಿದರೆ ಬಂಗಾರಪ್ಪನವರ ರಾಜಕೀಯ ಪಾರದರ್ಶಕತೆ ಮತ್ತೆ ವಿಜೃಂಭಿಸಲಿದೆ ಎಂದರು. ಸಚಿವ ಮಧು ಬಂಗಾರಪ್ಪ ಕೂಡಾ ಉತ್ತಮ ರಾಜಕಾರಣಿಯಾಗಿದ್ದು ಜನಸ್ನೇಹಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಉತ್ತಮ ನಾಯಕರನ್ನು ಹೊಂದಲು ಈ ಚುನಾವಣೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ಭಾವಿಸುತ್ತೇನೆ ಎಂದರು.
ಬೈಂದೂರು ಮಾಜೀ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ, ಬೇಳೂರು ಶಾಸಕ ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಕೆಪಿಸಿಸಿ ಸದಸ್ಯ ಪ್ರಕಾಶ್ ಶೆಟ್ಟಿ, ಕೆಪಿಸಿಸಿ ವಕ್ತಾರ ಅನಿಲ್, ಸಂಜೀವ ಶೆಟ್ಟಿ ಸಂಪಿಗೇಡಿ, ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…