ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವರಾಗಿರುವ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿ ಎರಡನೇ ಬಾರಿಗೆ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ.
ಈ ಹಿಂದೆ ಬಾಲಚಂದ್ರ ಭಟ್ ಜು.23 ರಂದು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದನ್ನು ನ್ಯಾಯಾಲಯ ತಿರಸ್ಕೃರಿಸಿತ್ತು. ಈಗ ಮತ್ತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದ ಬಳಿಕ ಬಾಲಚಂದ್ರ ಭತ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಮತ್ತೊಂದು ಬಾರಿ ಸಲ್ಲಿಸಿರುವ ಅರ್ಜಿಯನ್ನು ಕೂಡ ನ್ಯಾಯಾಧೀಶ ರವೀಂದ್ರ ಎಂ.ಜೋಷಿ ತಿರಸ್ಕರಿಸಿ ಆದೇಶ ನೀಡಿದ್ದಾರೆ.
ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು. ಜೂ.5ರಂದು ರಾತ್ರಿ ವೇಳೆ ಯಡಮೊಗೆ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುಕೆ ಮಾರ್ಗಸೂಚಿ ಬದಲಾವಣೆ : ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್ – Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…