Featured

ಕುಂದಾಪುರ: ಉದ್ಯಮಕ್ಕೆಂದು ಮಹಿಳೆಯಿಂದ 10 ಲಕ್ಷ ರೂ.ಹಣ ಪಡೆದು ವಂಚನೆ # ಪ್ರಕರಣ ದಾಖಲು – Vishwanews24

ಕುಂದಾಪುರ: ಉದ್ಯಮಕ್ಕೆಂದು ಮಹಿಳೆಯಿಂದ 10 ಲಕ್ಷ ರೂ.ಹಣ ಪಡೆದು ವಂಚನೆ- ಪ್ರಕರಣ ದಾಖಲು

ಕುಂದಾಪುರ: ಮಹಿಳೆಯೊಬ್ಬರಿಂದ ತನ್ನ ಉದ್ಯಮಕ್ಕೆಂದು ಒಟ್ಟು 10 ಲಕ್ಷ ರೂ.ಹಣ ಪಡೆದ ವ್ಯಕ್ತಿಯೊಬ್ಬ ಮೂರು ವರ್ಷ ಕಳೆದರೂ ಹಣ ಹಿಂದಿರುಗಿಸದೇ, ಕೇಳಿದಾಗ ಜೀವಬೆದರಿಕೆ ಒಡ್ಡಿದ ಕುರಿತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆಗೊಳಗಾದ ಮಹಿಳೆ ಬೇಬಿ ಮೊಗವೀರ ಆಗಿದ್ದು ಪ್ರಕಾಶ್ ಎಚ್ ಎಂಬಾತ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ.

3-4ವರ್ಷಗಳ ಹಿಂದೆ ಪರಿಚಯವಾದ ಪ್ರಕಾಶ್ ತಾನು ಕ್ಯಾಟರಿಂಗ್ ವ್ಯವಹಾರ ನಡೆಸುತಿದ್ದು ಹೊಸ ಉದ್ಯಮ ಪ್ರಾರಂಭಿಸಲು ತುರ್ತು ಹಣದ ಅಗತ್ಯವಿದೆ ಎಂದು ಬೇಬಿ ಮೊಗವೀರ ಅವರನ್ನು ನಂಬಿಸಿ 2020-21ರ ನಡುವೆ ಒಟ್ಟು 10 ಲಕ್ಷ ರೂ. ಹಣವನ್ನು ಪಡೆದುಕೊಂಡಿದ್ದನು. ತನಗೆ ಲೋನ್ ಸಿಕ್ಕ ನಂತರ ಹಣ ಹಿಂದಿರುಗಿಸುವುದಾಗಿ ಆಕೆಗೆ ಭರವಸೆ ನೀಡಿದ್ದ ಇದಕ್ಕಾಗಿ ಬೇಬಿ ಮೊಗವೀರ ಅವರು ತನ್ನ ಚಿನ್ನವನ್ನು ಕುಂದಾಪುರದ ಫೆಡರಲ್ ಬ್ಯಾಂಕ್ ಶಾಖೆಯಲ್ಲಿ ಅಡವಿಟ್ಟು ಒಟ್ಟು ಐದು ಕಂತುಗಳಲ್ಲಿ ಒಟ್ಟು 10 ಲಕ್ಷ ರೂ.ಗಳನ್ನು ಆರೋಪಿಗೆ ನೀಡಿದ್ದರು.

3 ವರ್ಷವಾದರೂ ಸಾಲ ಕಟ್ಟದಿದ್ದಾಗ ಚಿನ್ನವನ್ನು ಬ್ಯಾಂಕಿನವರು ಮುಟ್ಟುಗೋಲು ಹಾಕಿಕೊಂಡಿದ್ದರು. ತನ್ನ ಹಣ ಹಿಂದಿರುಗಿಸುವಂತೆ ಪದೇ ಪದೇ ಕೇಳಿದರೂ ಸುಳ್ಳು ಹೇಳುತಿದ್ದ ಪ್ರಕಾಶ್ ಕೊನೆಗೆ ನಾನು ಹಣ ಕೊಡುವುದಿಲ್ಲ ನಿನ್ನನ್ನು ಹಾಗೂ ಮಗನಿಗೆ ಗತಿ ಕಾಣಿಸುವುದಾಗಿ ಬೆದರಿಕೆ ಒಡ್ಡಿದ ಎಂದು ಬೇಬಿ ಮೊಗವೀರ ಕುಂದಾಪುರ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago