ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾದ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಇದು ಬಹುಕೋಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವಾಗಿದ್ದು, ಕಟ್ಟೆ, ಭೋಜಣ್ಣ ಅವರು ಆರೋಪಿ ಗಣೇಶ್ ಶೆಟ್ಟಿ ಮನೆಯಲ್ಲಿಯೇ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾತ್ರವಲ್ಲ, ಪೊಲೀಸ್ ಠಾಣೆಯ ಎಸ್.ಎಚ್.ಒ. ಅವರನ್ನು ಪ್ರಸ್ತಾಪಿಸಿ ಡೆತ್ನೋಟ್ ಬರೆದಿರುವುದರಿಂದ ಆರೋಪಿಗೆ ಜಾಮೀನು ನೀಡಬಾರದು ಎನ್ನುವುದಾಗಿ ಸರಕಾರಿ ಅಭಿಯೋಜಕ ಬೇಳೂರು ಪುಕಾಶ್ಚಂದ್ರ ಶೆಟ್ಟಿ ವಾದ ಮಂಡಿಸಿದ್ದಾರೆ.
ಎಂದು ತಿಳಿದುಬಂದಿದೆ.
ಪ್ರಾಸಿಕ್ಯೂಶನ್ ಮಂಡಿಸಿದ ವಾದವನ್ನು ಪುರಸ್ಕರಿಸಿದ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ, ಅಬ್ದುಲ್ ರಹೀಮ್ ಹುಸೇನ್ ಶೇಖ್ ಅವರು ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಕಟ್ಟಿ ಭೋಜಣ್ಣ ಅವರು ಮೇ 26 ರಂದು ಬೆಳಗ್ಗೆ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರ ಮನೆಯ ಸಿಟೌಟ್ನಲ್ಲಿ ತನ್ನದೇ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…