ಕುಂದಾಪುರ : ಉದ್ಯಮಿ, ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊರ್ವನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಎಸ್ಎಸ್ಎಸ್ ಟ್ರಾವೆಲ್ಸ್ ಎಂಬ ಸಂಸ್ಥೆಯ ಮಾಲೀಕ ಸತೀಶ್ ಶೆಟ್ಟಿ (53)ಹಾಗೂ ಆತನ ಪುತ್ರ ಸನ್ನಿಧಿ ಶೆಟ್ಟಿ (24) ತಲೆಮರೆಸಿಕೊಂಡಿದ್ದಾನೆ.
ಉದ್ಯಮಿ ಸುರೇಂದ್ರ ಶೆಟ್ಟಿ ಪತ್ನಿ ಸಹನಾ ಸುರೇಂದ್ರ ಶೆಟ್ಟಿಯವರು ಕುಂದಾಪುರ ನಗರದ ಎ.ಎಸ್ ಟ್ರೇಡರ್ ಎಂಬ ಪ್ಲ್ಯಾಟ್ ನಲ್ಲಿ ಮಳೆ ನೀರಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರು. ಇದೇ ಸಂದರ್ಭ ಮೊದಲ ಮಹಡಿಯಲ್ಲಿದ್ದ ಆರೋಪಿ ಸತೀಶ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಸುರೇಂದ್ರ ಶೆಟ್ಟಿಗೆ ಕರೆ ಮಾಡಿ ಅವಾಚ್ಯವಾಗಿ ಬೈದಿದ್ದ ಎನ್ನಲಾಗಿದೆ. ಬಳಿಕ ಜುಲೈ 7 ರಂದು ಬೆಳಿಗ್ಗೆ ಕುಂದಾಪುರದ ಕೆ.ಎಸ್.ಆರ್.ಟಿ.ಸಿ ಡಿಪ್ಪೋ ಎದುರಿನ ಸರ್ವೀಸ್ ರಸ್ತೆಯಲ್ಲಿ ಸುರೇಂದ್ರ ಶೆಟ್ಟಿಯವರ ಕಾರಿಗೆ ಆರೋಪಿಗಳು ಇನ್ನೋವಾ ಕಾರನ್ನು ಅಡ್ಡ ನಿಲ್ಲಿಸಿ ಕಬ್ಬಿಣದ ರಾಡ್ ಮೂಲಕ ಹಲ್ಲೆ ನಡೆಸಲು ಯತ್ನಿಸಿದ್ದು, ಕಾರಿನ ಗ್ಲಾಸ್ ಹಾಗೂ ಕಾರಿನ ಡೋರ್ ಅನ್ನು ಜಖಂ ಮಾಡಿ, ಪೋಲೀಸರಿಗೆ ದೂರು ನೀಡಿದ್ದಲ್ಲಿ ಕೊಲ್ಲುವುದಾಗಿ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಉದ್ಯಮಿ ಸುರೇಂದ್ರ ಶೆಟ್ಟಿ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಸತೀಶ್ ಶೆಟ್ಟಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಸತೀಶ್ ಶೆಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನ ಪುತ್ರ ಸನ್ನಿಧಿ ಶೆಟ್ಟಿ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…