ಕುಂದಾಪುರ: ಉದ್ಘಾಟನೆಗೊಂಡು ನಾಲ್ಕೇ ವರ್ಷದಲ್ಲಿ ಕಟ್ಟಡದ ಛಾವಣಿ ಕುಸಿದ ಪರಿಣಾಮ ಕಚೇರಿಯಲ್ಲಿದ್ದ ಒಬ್ಬ ಗಾಯಗೊಂಡು ಉಳಿದವರು ಪವಾಡ ಸದೃಶ ಪಾರಾದ ಘಟನೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.
ಛಾವಣಿ ಕುಸಿತದಿಂದ ಗಾಯಗೊಂಡವರನ್ನು ವಾರಾಹಿ ಪಾಜೆಕ್ಟ್ನ ನಿವೃತ್ತ ಉದ್ಯೋಗಿ ನಾರಾಯಣ ಬಿಲ್ಲವ ಎಂದು ಗುರುತಿಸಲಾಗಿದೆ.
ಶನಿವಾರ ಬೆಳಿಗ್ಗೆ ಹನ್ನೊಂದು ಗಂಟೆ ಸುಮಾರಿಗೆ ಮಿನಿ ವಿಧಾನಸೌಧದ ಮೇಲಂತಸ್ತಿನಲ್ಲಿರುವ ಕುಂದಾಪುರ ಉಪವಿಭಾಗಾಧಿಕಾರಿಯವರ ಸಿಬ್ಬಂದಿಗಳ ಕಚೇರಿಯಲ್ಲಿ ಮೇಲಿನಿಂದ ಛಾವಣಿ ಕುಸಿದು ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿದ್ದ ನಾರಾಯಣ ಬಿಲ್ಲವ ಎಂಬುವರ ಮೇಲೆ ಛಾವಣಿ ಕುಸಿದು ಬಿದ್ದಿದೆ. ಪರಿಣಾಮವಾಗಿ ನಾರಾಯಣ ಬಿಲ್ಲವರ ತಲೆ ಹಾಗೂ ಕೈ ಕಾಲುಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರ್ಮಾಣಕ್ಕೆ ಮೊದಲೇ ಬಿರುಕು ಕಾಣಿಸಿಕೊಂಡಿದ್ದ ಕುಂದಾಪುರದ ಮಿನಿ ವಿಧಾನ ಸೌಧ ಉದ್ಘಾಟನೆಗೆ ಮುನ್ನವೇ ತೇಪೆ ಹಚ್ಚಿಕೊಂಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 2015 ರ ಫೆಬ್ರುವರಿ 7 ರಂದು ಉದ್ಘಾಟನೆಗೊಂಡಿತ್ತು.
ಮಿನಿವಿಧಾನಸೌಧ ಉದ್ಘಾಟನೆಗೂ ಮುನ್ನವೇ ಪತ್ರಿಕೆ ಹಾಗೂ ಮಾಧ್ಯಮಗಳು ಕಟ್ಟಡದ ಕಳಪೆ ಕಾಮಗಾರಿ ಬಗ್ಗೆ ಬೆಳಕು ಚೆಲ್ಲಿದ್ದವು. ಸಾರ್ವಜನಿಕರೂ ಕಾಮಗಾರಿ ಬಗ್ಗೆ ಅಧಿಕಾರಿಗಳಿಗೆ ಪರಿಶೀಲಿಸುವಂತೆ ಮನವಿ ಮಾಡಿದ್ದರು.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದರು. ಪರಿಣಾಮವಾಗಿ ಉದ್ಘಾಟನೆಗೊಂಡು ಒಂದೇ ವರ್ಷದಲ್ಲಿ ಮಿನಿವಿಧಾನಸವಧದ ಕಟ್ಟಡ ಸಂಪೂರ್ಣ ಬಿರುಕು ಬಿಟ್ಟಿತ್ತು. ಎರಡನೆ ಮಳೆಗಾಲದಲ್ಲಿ ಕಟ್ಟಡದಲ್ಲಿ ಸೋರಿಕೆ ಕಂಡು ಬಂದಿತ್ತು. ಇದೀಗ ನಾಲ್ಕೇ ವರ್ಷದಲ್ಲಿ ಛಾವಣಿ ಕುಸಿದಿರುವುದು ಆತಂಕ್ಕೆಡೆಮಾಡಿಕೊಟ್ಟಿದ್ದು, ಹಲವು ಇಲಾಖೆಗಳು ಈ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿವೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…