ಕುಂದಾಪುರ: ಉದ್ಘಾಟನೆಗೊಂಡು ನಾಲ್ಕೇ ವರ್ಷದಲ್ಲಿ ಕಟ್ಟಡದ ಛಾವಣಿ ಕುಸಿದ ಪರಿಣಾಮ ಕಚೇರಿಯಲ್ಲಿದ್ದ ಒಬ್ಬ ಗಾಯಗೊಂಡು ಉಳಿದವರು ಪವಾಡ ಸದೃಶ ಪಾರಾದ ಘಟನೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.
ಛಾವಣಿ ಕುಸಿತದಿಂದ ಗಾಯಗೊಂಡವರನ್ನು ವಾರಾಹಿ ಪಾಜೆಕ್ಟ್ನ ನಿವೃತ್ತ ಉದ್ಯೋಗಿ ನಾರಾಯಣ ಬಿಲ್ಲವ ಎಂದು ಗುರುತಿಸಲಾಗಿದೆ.
ಶನಿವಾರ ಬೆಳಿಗ್ಗೆ ಹನ್ನೊಂದು ಗಂಟೆ ಸುಮಾರಿಗೆ ಮಿನಿ ವಿಧಾನಸೌಧದ ಮೇಲಂತಸ್ತಿನಲ್ಲಿರುವ ಕುಂದಾಪುರ ಉಪವಿಭಾಗಾಧಿಕಾರಿಯವರ ಸಿಬ್ಬಂದಿಗಳ ಕಚೇರಿಯಲ್ಲಿ ಮೇಲಿನಿಂದ ಛಾವಣಿ ಕುಸಿದು ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿದ್ದ ನಾರಾಯಣ ಬಿಲ್ಲವ ಎಂಬುವರ ಮೇಲೆ ಛಾವಣಿ ಕುಸಿದು ಬಿದ್ದಿದೆ. ಪರಿಣಾಮವಾಗಿ ನಾರಾಯಣ ಬಿಲ್ಲವರ ತಲೆ ಹಾಗೂ ಕೈ ಕಾಲುಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರ್ಮಾಣಕ್ಕೆ ಮೊದಲೇ ಬಿರುಕು ಕಾಣಿಸಿಕೊಂಡಿದ್ದ ಕುಂದಾಪುರದ ಮಿನಿ ವಿಧಾನ ಸೌಧ ಉದ್ಘಾಟನೆಗೆ ಮುನ್ನವೇ ತೇಪೆ ಹಚ್ಚಿಕೊಂಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 2015 ರ ಫೆಬ್ರುವರಿ 7 ರಂದು ಉದ್ಘಾಟನೆಗೊಂಡಿತ್ತು.
ಮಿನಿವಿಧಾನಸೌಧ ಉದ್ಘಾಟನೆಗೂ ಮುನ್ನವೇ ಪತ್ರಿಕೆ ಹಾಗೂ ಮಾಧ್ಯಮಗಳು ಕಟ್ಟಡದ ಕಳಪೆ ಕಾಮಗಾರಿ ಬಗ್ಗೆ ಬೆಳಕು ಚೆಲ್ಲಿದ್ದವು. ಸಾರ್ವಜನಿಕರೂ ಕಾಮಗಾರಿ ಬಗ್ಗೆ ಅಧಿಕಾರಿಗಳಿಗೆ ಪರಿಶೀಲಿಸುವಂತೆ ಮನವಿ ಮಾಡಿದ್ದರು.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದರು. ಪರಿಣಾಮವಾಗಿ ಉದ್ಘಾಟನೆಗೊಂಡು ಒಂದೇ ವರ್ಷದಲ್ಲಿ ಮಿನಿವಿಧಾನಸವಧದ ಕಟ್ಟಡ ಸಂಪೂರ್ಣ ಬಿರುಕು ಬಿಟ್ಟಿತ್ತು. ಎರಡನೆ ಮಳೆಗಾಲದಲ್ಲಿ ಕಟ್ಟಡದಲ್ಲಿ ಸೋರಿಕೆ ಕಂಡು ಬಂದಿತ್ತು. ಇದೀಗ ನಾಲ್ಕೇ ವರ್ಷದಲ್ಲಿ ಛಾವಣಿ ಕುಸಿದಿರುವುದು ಆತಂಕ್ಕೆಡೆಮಾಡಿಕೊಟ್ಟಿದ್ದು, ಹಲವು ಇಲಾಖೆಗಳು ಈ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿವೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…