Featured

ಕುಂದಾಪುರ : ಕಳ್ಳತನಕ್ಕೆ ಯತ್ನಿಸುತ್ತಿರುವಾಗಲೇ ಆರೋಪಿ ಲಾಕ್ ; ಕಳ್ಳನನ್ನು 10 ನಿಮಿಷದಲ್ಲಿ ಸೆರೆ ಹಿಡಿದ ಪೊಲೀಸರು – vishwanews24

ಕುಂದಾಪುರ : ಕಳ್ಳತನಕ್ಕೆ ಯತ್ನಿಸುತ್ತಿರುವಾಗಲೇ ಆರೋಪಿ ಲಾಕ್ ; ಕಳ್ಳನನ್ನು 10 ನಿಮಿಷದಲ್ಲಿ ಸೆರೆ ಹಿಡಿದ ಪೊಲೀಸರು

ಗಂಗೊಳ್ಳಿ: ಹೊಸಾಡು ಶಾಖೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಿಕಿಯ ಸರಳು ಮುರಿದು ಕಳ್ಳತನ ನಡೆದಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿದ 10 ನಿಮಿಷದಲ್ಲೇ ಕಳ್ಳನನ್ನು ಹಿಡಿದ ಘಟನೆ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ.

ರಾತ್ರಿ ಸುಮಾರು 1.47 ಕ್ಕೆ ಮುಳ್ಳಿಕಟ್ಟೆಯಲ್ಲಿರುವ ಸಹಕಾರಿ ಸಂಘ ಕಿಟಕಿಯ ಗ್ರಿಲ್ ಒಡೆದು ಕಳ್ಳ ಒಳನುಗ್ಗಿದ್ದಾನೆ . ಕುಂದಾಪುರ ಅಂಕದಕಟ್ಟೆಯಲ್ಲಿರುವ ಸೈನ್ ಇನ್ ಸೆಕ್ಯುರಿಟಿಯ ಸಿಸಿಟಿವಿ ಲೈವ್ ಮಾನಿಟರಿಂಗ್ ನಲ್ಲಿ ಘಟನೆ ಬೆಳಕಿಗೆ ಬಂದು ಬೀಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು.

10 ನಿಮಿಷದಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಕಳ್ಳನನ್ನು ಹಿಡಿದರು. ಕಳ್ಳ ಕೇರಳದಿಂದ ಬಂದವನು ಎನ್ನಲಾಗಿದೆ. ಪೊಲೀಸ್ ಇಲಾಖೆಯಿಂದ ಹೆಚ್ಚಿನ ಮಾಹಿತಿ ಕುರಿತು ತನಿಖೆ ನಡೆಯುತ್ತಿದೆ.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಲೈವ್ ಮಾನಿಟರಿಂಗ್ ಸಿಬ್ಬಂದಿ, ಗಂಗೊಳ್ಳಿ ಪೊಲೀಸರ ಸಮಯಪ್ರಜ್ಞೆಯಿಂದ ಕಳ್ಳನನ್ನು ತಕ್ಷಣ ಸೆರೆ ಹಿಡಿಯಲು ಸಾಧ್ಯವಾಗಿದೆ.

ಏನಿದು ಸೈನ್ ಇನ್ ಸೆಕ್ಯೂರಿಟಿ?:
ದೇವಸ್ಥಾನ, ಜ್ಯುವೆಲ್ಲರಿ, ಅಂಗಡಿ, ಮನೆ, ಫ್ಲ್ಯಾಟ್ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸುವುದು ಒಂದೆಡೆಯಾದರೆ, ಅಳವಡಿಸಿದ ಸಿಸಿ ಟಿವಿ ದೃಶ್ಯಾವಳಿಗಳನ್ನು ದಿನದ 24 ಗಂಟೆಯೂ ಸತತವಾಗಿ ಹದ್ದಿನ ಕಣ್ಣಿಟ್ಟು ಕಾಯುವುದು ಕಾರ್ಯಾಚರಣೆಯ ಇನ್ನೊಂದು ಭಾಗ, ಟಿವಿ, ಲ್ಯಾಪ್‌ಟಾಪ್ ಮೂಲಕ ನಿತ್ಯದ ಮಾನಿಟರಿಂಗ್ ವ್ಯವಸ್ಥೆಯನ್ನು ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆ ಕುಂದಾಪುರದ ಅಂಕದಕಟ್ಟೆಯಲ್ಲಿ ಮಾಡುತ್ತಿದೆ. ಇದರ ವ್ಯವಸ್ಥಾಪಕ ಕೃಷ್ಣ ಪೂಜಾರಿ ಅವರ ತಂಡ ಪೊಲೀಸರ ಮಾರ್ಗದರ್ಶನದಲ್ಲಿ ರಾತ್ರಿ -ಹಗಲು ಸಿಸಿ ಟಿವಿ ಕಣ್ಗಾವಲು ಕಾಯುತ್ತದೆ. 60 ಕ್ಯಾಮೆರಾಗಳ ಮಾನಿಟರಿಂಗ್ ಮಾಡುವ ಮೂಲಕ ಆರಂಭಗೊಂಡ ಈ ಸಂಸ್ಥೆ ಇದೀಗ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅಳವಡಿಸಿರುವ ಬರೋಬ್ಬರಿ 450 ಕ್ಯಾಮೆರಾಗಳನ್ನು ಮಾನಿಟರಿಂಗ್ ಮಾಡುತ್ತಿದೆ. ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ಹೆಚ್ಚಿನ ಧಾರ್ಮಿಕ ಸಂಸ್ಥೆಗಳು, ಕಾರ್ಖಾನೆಗಳು, ಉದ್ಯಮಗಳುಹಾಗೂ ಸಾರ್ವಜನಿಕರು ಈಗಾಗಲೇ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಗ್ರಾಹಕರಲ್ಲದೆ ತಮ್ಮ ವ್ಯಾಪ್ತಿಯೊಳಗೆ ಬರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಈ ರೀತಿಯ ಪ್ರಯತ್ನ ಹಾಗೂ ಘಟನೆಗಳು ಕಂಡು ಬಂದಲ್ಲಿ ಸೆಕ್ಯುರಿಟಿ ಸಂಸ್ಥೆ ಸಂಬಂಧಿಸಿದವರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

18 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago