ಕುಂದಾಪುರ : ಇಲ್ಲಿಗೆ ಸಮೀಪದ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.
ಬಡಾಕೆರೆ ಜೋಯಿಸರ ಬೆಟ್ಟು ಚಂದ್ರಪ್ರಕಾಶ ಶೆಟ್ಟಿ ಅವರು ಎಂದಿನಂತೆ ತಮ್ಮ ಹೋಂಡಾ ಅಮೇಜ್ ಕಾರನ್ನು ಚಲಾಯಿಸುತ್ತಾ ಬರುತ್ತಿದ್ದಾಗ ದಾರಿ ಮಧ್ಯೆ ಬಾನೆಟ್ ಒಳಗಿನಿಂದ ಜೊರಾದ ಶಬ್ಧ ಕೇಳಿಸಿದೆ. ತಕ್ಷಣ ಕಾರು ನಿಲ್ಲಿಸಿ ಬಾನೆಟ್ ಎತ್ತಿ ನೋಡಿದಾಗ ಸುಮಾರು 12 ಅಡಿ ಉದ್ದದ ಹೆಬ್ಬಾವು ಸಿಕ್ಕಿ ಹಾಕಿಕೊಂಡಿರುವುದು ಪತ್ತೆಯಾಗಿದೆ.
ಬಳಿಕ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಸತತ ಕಾರ್ಯಾಚರಣೆ ಮೂಲಕ ಕಾರಿನ ಬಾನೆಟ್ ಒಳಗಿರುವ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ್ ಶೆಟ್ಟಿ, ಅನಿಲ್, ಹರೀಶ್ ಪೂಜಾರಿ, ಉದಯ, ಜನಪ್ರತಿನಿಧಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…