ಕುಂದಾಪುರ : ಇಲ್ಲಿಗೆ ಸಮೀಪದ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.
ಬಡಾಕೆರೆ ಜೋಯಿಸರ ಬೆಟ್ಟು ಚಂದ್ರಪ್ರಕಾಶ ಶೆಟ್ಟಿ ಅವರು ಎಂದಿನಂತೆ ತಮ್ಮ ಹೋಂಡಾ ಅಮೇಜ್ ಕಾರನ್ನು ಚಲಾಯಿಸುತ್ತಾ ಬರುತ್ತಿದ್ದಾಗ ದಾರಿ ಮಧ್ಯೆ ಬಾನೆಟ್ ಒಳಗಿನಿಂದ ಜೊರಾದ ಶಬ್ಧ ಕೇಳಿಸಿದೆ. ತಕ್ಷಣ ಕಾರು ನಿಲ್ಲಿಸಿ ಬಾನೆಟ್ ಎತ್ತಿ ನೋಡಿದಾಗ ಸುಮಾರು 12 ಅಡಿ ಉದ್ದದ ಹೆಬ್ಬಾವು ಸಿಕ್ಕಿ ಹಾಕಿಕೊಂಡಿರುವುದು ಪತ್ತೆಯಾಗಿದೆ.
ಬಳಿಕ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಸತತ ಕಾರ್ಯಾಚರಣೆ ಮೂಲಕ ಕಾರಿನ ಬಾನೆಟ್ ಒಳಗಿರುವ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ್ ಶೆಟ್ಟಿ, ಅನಿಲ್, ಹರೀಶ್ ಪೂಜಾರಿ, ಉದಯ, ಜನಪ್ರತಿನಿಧಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…