ಕುಂದಾಪುರ: ಸರಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಙ ಇವರು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಶಿರವಸ್ತ್ರ ಧರಿಸಿ ಬಂದರೆ ಕಾಲೇಜು ಒಳಗಡೆ ಬಿಡುವುದಿಲ್ಲ ಎಂದು ಹೇಳಿದ್ದಲ್ಲದೆ ಸ್ವತಃ ಗೇಟನ್ನು ಮುಚ್ಚಿ, ವಿದ್ಯಾರ್ಥಿನಿಯರನ್ನು ಒಳಬರದಂತೆ ತಡೆದಿರುವುದನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಇಬ್ರಾಹೀಂ ಸಾಹೇಬ್ ಕೋಟ ಹೇಳಿದ್ದಾರೆ.
ಈ ಮುಸ್ಲಿಂ ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷದ ಆರಂಭದಿಂದಲೂ ಮತ್ತು ಈ ಹಿಂದೆ ಇದೇ ಕಾಲೇಜಿನಿಂದ ಶಿಕ್ಷಣ ಪೂರ್ತಿಗೊಳಿಸಿದ ಮುಸ್ಲಿಮ್ ವಿದ್ಯಾರ್ಥಿನಿಯರು ಕೂಡಾ ಹಲವಾರು ವರ್ಷಗಳಿಂದ ನಿರಂತರವಾಗಿ ಸದರಿ ಕಾಲೇಜಿಗೆ ಶಿರವಸ್ತ್ರ ಧರಿಸಿಯೇ ಬಂದು ತಮ್ಮ ಒಂದು ಹಂತದ ಶಿಕ್ಷಣ ಪೂರ್ತಿಗೊಳಿಸಿ ತಮ್ಮ ಮುಂದಿನ ಜೀವನ ನಡೆಸುತ್ತಿದ್ದಾರೆ. ಈಗ ಏಕಾಏಕಿ ನಿನ್ನೆಯಿಂದ(03-02-2022) ಶಿರವಸ್ತ್ರ ಧರಿಸಿ ಬಂದಲ್ಲಿ ಕಾಲೇಜಿನ ಒಳಗಡೆ ಪ್ರವೇಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹೇಳುತ್ತಿದ್ದಾರೆ.
ಇದನ್ನೂ ಓದಿ :
ಕಾಲೇಜಿನ ಪ್ರಾಂಶುಪಾಲರ ಸದರಿ ಹೇಳಿಕೆ ಮತ್ತು ವಿದ್ಯಾರ್ಥಿನಿಯರನ್ನು ಶಿಕ್ಷಣ ಪಡೆಯಲು ತರಗತಿಗೆ ಬರದಂತೆ ತಡೆಹಿಡಿಯುತ್ತಿರುದರ ಹಿಂದೆ ಯಾರ ಹುನ್ನಾರವಿದೆ ? ಶಿಕ್ಷಣ ಪಡೆಯುವಲ್ಲಿ ಬರಬಹುದಾದ ಅಡೆತಡೆಗಳನ್ನು ನಿವಾರಿಸಿ ವಿದ್ಯೆ ನೀಡಬೇಕಾದ ಪ್ರಾಂಶುಪಾಲರೇ ವಿದ್ಯಾರ್ಥಿನಿಯರಿಗೆ ನ್ಯಾಯಯುತವಾಗಿ ಸಿಗಬೇಕಾದ ವಿದ್ಯೆಯ ಬಾಗಿಲನ್ನು ಏಕೆ ಮುಚ್ಚುತ್ತಿದ್ದಾರೆ ? ಮಾನ್ಯ ಪ್ರಾಂಶುಪಾಲರು ತಮ್ಮ ಕರ್ತವ್ಯ ನಿಷ್ಠೆಯನ್ನು ಏಕೆ ಮರೆತಿದ್ದಾರೆ ? ಇದು ಬೇಜವಾಬ್ದಾರಿತನದ ನಡವಳಿಕೆಯಲ್ಲವೆ ? ವಿದ್ಯಾರ್ಥಿಗಳ ಏಳಿಗೆ ಮತ್ತವರ ಯಶಸ್ಸನ್ನು ಬಯಸುವ ಒಬ್ಬ ನಿಜವಾದ ಗುರು ವಿದ್ಯೆಗಾಗಿ ಪರಿತಪಿಸುವ ತನ್ನ ವಿದ್ಯಾರ್ಥಿಗಳನ್ನು ವಿದ್ಯಾಮಂದಿರದ ಒಳಗಡೆ ಪ್ರವೇಶಿಸಲು ಬಿಡದೆ ಹೀಗೆ ಗಂಟೆಗಟ್ಟಲೆ ಬಿಸಿಲಲ್ಲಿ ಕೂರಿಸಿ ಕಾಯಿಸಬಲ್ಲನೆ ? ಇದು ಅಮಾನವೀಯ ನಡೆ ಅಲ್ಲವೇ? ಇದು ದೇಶದ ಸಂವಿಧಾನದ ಮೂಲತತ್ವಗಳ ಉಲ್ಲಂಘನೆ ಮತ್ತು ಶಿಕ್ಷಣದ ಹಕ್ಕಿನ ನಿರಾಕರಣೆಯಾಗಿದೆ. ಈ ಕುರಿತು ‘ಮಾನವ ಹಕ್ಕು ಆಯೋಗ’ ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿನಿಯರಿಗೆ ನ್ಯಾಯ ಕೊಡಿಸಿ ಅವರ ಶೈಕ್ಷಣಿಕ ಬದುಕು ಹಾಗೂ ಅವರ ಭವಿಷ್ಯ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ಇದನ್ನೂ ಓದಿ :
ಈ ಮುಂಚೆ ಹೇಗೆ ಮುಸ್ಲಿಂ ವಿದ್ಯಾರ್ಥಿನಿಯರು ಶಿರವಸ್ತ್ರ ಧರಿಸಿ ತರಗತಿಗೆ ಹೇಗೆ ಹಾಜರಾಗುತ್ತಿದ್ದರೋ ಅದೇ ರೀತಿಯಲ್ಲಿ ಇನ್ನು ಮುಂದೆಯೂ ತರಗತಿಗೆ ಹಾಜರಾಗಲು ಅವಕಾಶ ಒದಗಿಸಬೇಕು. ವಿದ್ಯಾರ್ಥಿನಿಯರ ಶೈಕ್ಷಣಿಕ ಬದುಕಿಗೆ ವಿದ್ಯೆ ನೀಡಬೇಕಾದವರೆ ಅವರ ಭವಿಷ್ಯಕ್ಕೆ ಅಡ್ಡಗಾಲು ಹಾಕಬಾರದು ಎಂದು ಒಕ್ಕೂಟದ ಅಧ್ಯಕ್ಷರು ಕಾಲೇಜು ಆಡಳಿತ ಮಂಡಳಿ ಮತ್ತು ಕಾಲೇಜಿನ ಪ್ರಾಂಶುಪಾಲರನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…