Featured

ಕುಂದಾಪುರ: ಕಾಸರಗೋಡು ಇಕೋ  ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಕಾನ್‌ಸ್ಟೇಬಲ್  – Vishwanews24

ಕುಂದಾಪುರ: ಕಾಸರಗೋಡು ಇಕೋ  ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಕಾನ್‌ಸ್ಟೇಬಲ್

ಕುಂದಾಪುರ : ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್‌ ಬಳಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಗೆ ಅನಾರೋಗ್ಯ ಅಥವಾ ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂಬ ಶಂಕೆ ಮೂಡಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಗ್ರಾಮದ ನಾಗೇಶ ಗೌಡ ಅವರ ಪುತ್ರ ರಾಮ ಗೌಡ (32) ಆತ್ಮಹತ್ಯೆಗೆ ಶರಣಾದವರು. ಕಳೆದ 5 ವರ್ಷಗಳಿಂದ ಕುಂದಾಪುರ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿದ್ದರು. ಮಂಗಳವಾರ ಘಟನೆ ಬೆಳಕಿಗೆ ಬಂದಿದೆ.

ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳಿಗೆ ತಿಳಿಸದೆ ಫೆಬ್ರವರಿ 2ರಿಂದಲೇ ರಾಮ ಗೌಡ ಅವರು ಕೆಲಸಕ್ಕೆ ಗೈರು ಹಾಜರಾಗಿದ್ದರು. ಅಲ್ಲದೆ ಕಳೆದ ನಾಲ್ಕೈದು ದಿನಗಳಿಂದ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಮಂಗಳವಾರ ಬೆಳಗ್ಗೆ ಕಾಸರಗೋಡಿನ ಇಕೋ ಬೀಚ್ ಸನಿಹದಲ್ಲಿರುವ ಪಾರ್ಕ್ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಮೃತದೇಹದ ಬಳಿ ಬ್ಯಾಗ್ ಕೂಡಾ ಪತ್ತೆಯಾಗಿದೆ. ಸ್ಥಳಕ್ಕೆ ಕುಂದಾಪುರ ಎಸ್‌ಐ ಈರಯ್ಯ ಹಾಗೂ ಸಿಬಂದಿ ಭೇಟಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಯ್ಯ ಗೌಡ ಅವರು ಉತ್ತಮ ವಾಲಿಬಾಲ್ ಪಟುವಾಗಿದ್ದರು. ಕೆಲ ದಿನಗಳಿಂದ ಏಕಾಂಗಿಯಾಗಿರುತ್ತಿದ್ದ ಅವರಿಗೆ ಆರೋಗ್ಯ ಸಮಸ್ಯೆಯೂ ಕಾಡುತ್ತಿತ್ತು ಎನ್ನಲಾಗುತ್ತಿದೆ. ಇದಲ್ಲದೆ ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿಕೊಂಡಿದ್ದರು ಎಂದೂ ಹೇಳಲಾಗುತ್ತಿದೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ರಾಮ ಬರೆದಿದ್ದಾರೆನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಂಗಿಯ ಮದುವೆ ಮಾಡಿಸಲು ನನ್ನಿಂದ ಸಾಧ್ಯವಾಗದ ಕಾರಣ ಆಕೆಗೆ ಸರ್ಕಾರಿ ಉದ್ಯೋಗ ನೀಡಿ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago