Featured

ಕುಂದಾಪುರ: ಕಾಸರಗೋಡು ಇಕೋ  ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಕಾನ್‌ಸ್ಟೇಬಲ್  – Vishwanews24

ಕುಂದಾಪುರ: ಕಾಸರಗೋಡು ಇಕೋ  ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಕಾನ್‌ಸ್ಟೇಬಲ್

ಕುಂದಾಪುರ : ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್‌ ಬಳಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಗೆ ಅನಾರೋಗ್ಯ ಅಥವಾ ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂಬ ಶಂಕೆ ಮೂಡಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಗ್ರಾಮದ ನಾಗೇಶ ಗೌಡ ಅವರ ಪುತ್ರ ರಾಮ ಗೌಡ (32) ಆತ್ಮಹತ್ಯೆಗೆ ಶರಣಾದವರು. ಕಳೆದ 5 ವರ್ಷಗಳಿಂದ ಕುಂದಾಪುರ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿದ್ದರು. ಮಂಗಳವಾರ ಘಟನೆ ಬೆಳಕಿಗೆ ಬಂದಿದೆ.

ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳಿಗೆ ತಿಳಿಸದೆ ಫೆಬ್ರವರಿ 2ರಿಂದಲೇ ರಾಮ ಗೌಡ ಅವರು ಕೆಲಸಕ್ಕೆ ಗೈರು ಹಾಜರಾಗಿದ್ದರು. ಅಲ್ಲದೆ ಕಳೆದ ನಾಲ್ಕೈದು ದಿನಗಳಿಂದ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಮಂಗಳವಾರ ಬೆಳಗ್ಗೆ ಕಾಸರಗೋಡಿನ ಇಕೋ ಬೀಚ್ ಸನಿಹದಲ್ಲಿರುವ ಪಾರ್ಕ್ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಮೃತದೇಹದ ಬಳಿ ಬ್ಯಾಗ್ ಕೂಡಾ ಪತ್ತೆಯಾಗಿದೆ. ಸ್ಥಳಕ್ಕೆ ಕುಂದಾಪುರ ಎಸ್‌ಐ ಈರಯ್ಯ ಹಾಗೂ ಸಿಬಂದಿ ಭೇಟಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಯ್ಯ ಗೌಡ ಅವರು ಉತ್ತಮ ವಾಲಿಬಾಲ್ ಪಟುವಾಗಿದ್ದರು. ಕೆಲ ದಿನಗಳಿಂದ ಏಕಾಂಗಿಯಾಗಿರುತ್ತಿದ್ದ ಅವರಿಗೆ ಆರೋಗ್ಯ ಸಮಸ್ಯೆಯೂ ಕಾಡುತ್ತಿತ್ತು ಎನ್ನಲಾಗುತ್ತಿದೆ. ಇದಲ್ಲದೆ ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿಕೊಂಡಿದ್ದರು ಎಂದೂ ಹೇಳಲಾಗುತ್ತಿದೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ರಾಮ ಬರೆದಿದ್ದಾರೆನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಂಗಿಯ ಮದುವೆ ಮಾಡಿಸಲು ನನ್ನಿಂದ ಸಾಧ್ಯವಾಗದ ಕಾರಣ ಆಕೆಗೆ ಸರ್ಕಾರಿ ಉದ್ಯೋಗ ನೀಡಿ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago