ಕುಂದಾಪುರ: ನಿಮ್ಮ ಪ್ರತಿಯೊಂದು ಮತಗಳು ದೇಶದ ಒಗ್ಗೂಡುವಿಕೆ ಮತ್ತು ರಾಷ್ಟ್ರ ರಕ್ಷಣೆಯ ದೃಷ್ಟಿಯಲ್ಲಿ ಚಲಾಯಿಸಬೇಕಾಗಿದೆ ಆ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಭಾರತೀಯ ಜನತಾ ಪಾರ್ಟಿಯ ಕೋಟೇಶ್ವರ ಮಹಾಶಕ್ತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು ಸಶಕ್ತ ಸೇನೆ ದೇಶದ ಆರ್ಥಿಕ ಸುವ್ಯವಸ್ಥೆ ಇದೆಲ್ಲವೂ ನರೇಂದ್ರ ಮೋದಿ ಅವರ ಕೊಡುಗೆ ದೇಶ ಮೊದಲು ಎನ್ನುವ ಸಿದ್ಧಾಂತದೊಂದಿಗೆ ರಾಷ್ಟ್ರಭಕ್ತರು ಮತ್ತು ರಾಷ್ಟ್ರಧ್ರೋಹಿಗಳ ನಡುವಿನ ಚುನಾವಣೆ ಇದಾಗಿದೆ ಎಂದರು
ರಾಮ ಕೇವಲ ಕಾಲ್ಪನಿಕ ಎಂದು ಸುಪ್ರೀಂ ಕೋರ್ಟಿಗೆ ಅಪಿದವಿತ್ ಕೊಟ್ಟ ಕಾಂಗ್ರೆಸ್ ಪಕ್ಷದ ಆಡಳಿತವನ್ನು ದೇಶದಲ್ಲಿ ಮತ್ತೊಮ್ಮೆ ನಾವು ನೋಡುವಂತಾಗಬಾರದು ಎನ್ನುವುದಾದರೆ ಜೈ ಶ್ರೀ ರಾಮ್ ಘೋಷಣೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾವು ಮತ ಚಲಾಯಿಸಬೇಕಾಗಿದೆ ಎಂದರು.
ಇತ್ತೀಚೆಗೆ ಬಿಜೆಪಿಯ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಬೆದರಿಕೆ ಹಾಕುತ್ತಿರುವುದನ್ನು ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ ನಮ್ಮ ಕಾರ್ಯಕರ್ತರು ತಂಟೆಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಕುಂದಾಪುರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಮಂಡಲದ ನಿಕತಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುಧೀರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ, ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ ಶೆಟ್ಟಿ, ಕೋಟೇಶ್ವರ ಪಂಚಾಯತ್ ಅಧ್ಯಕ್ಷ ರಾಗಿಣಿ ದೇವಾಡಿಗ, ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…