ಕುಂದಾಪುರ: ನಿಮ್ಮ ಪ್ರತಿಯೊಂದು ಮತಗಳು ದೇಶದ ಒಗ್ಗೂಡುವಿಕೆ ಮತ್ತು ರಾಷ್ಟ್ರ ರಕ್ಷಣೆಯ ದೃಷ್ಟಿಯಲ್ಲಿ ಚಲಾಯಿಸಬೇಕಾಗಿದೆ ಆ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಭಾರತೀಯ ಜನತಾ ಪಾರ್ಟಿಯ ಕೋಟೇಶ್ವರ ಮಹಾಶಕ್ತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು ಸಶಕ್ತ ಸೇನೆ ದೇಶದ ಆರ್ಥಿಕ ಸುವ್ಯವಸ್ಥೆ ಇದೆಲ್ಲವೂ ನರೇಂದ್ರ ಮೋದಿ ಅವರ ಕೊಡುಗೆ ದೇಶ ಮೊದಲು ಎನ್ನುವ ಸಿದ್ಧಾಂತದೊಂದಿಗೆ ರಾಷ್ಟ್ರಭಕ್ತರು ಮತ್ತು ರಾಷ್ಟ್ರಧ್ರೋಹಿಗಳ ನಡುವಿನ ಚುನಾವಣೆ ಇದಾಗಿದೆ ಎಂದರು
ರಾಮ ಕೇವಲ ಕಾಲ್ಪನಿಕ ಎಂದು ಸುಪ್ರೀಂ ಕೋರ್ಟಿಗೆ ಅಪಿದವಿತ್ ಕೊಟ್ಟ ಕಾಂಗ್ರೆಸ್ ಪಕ್ಷದ ಆಡಳಿತವನ್ನು ದೇಶದಲ್ಲಿ ಮತ್ತೊಮ್ಮೆ ನಾವು ನೋಡುವಂತಾಗಬಾರದು ಎನ್ನುವುದಾದರೆ ಜೈ ಶ್ರೀ ರಾಮ್ ಘೋಷಣೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾವು ಮತ ಚಲಾಯಿಸಬೇಕಾಗಿದೆ ಎಂದರು.
ಇತ್ತೀಚೆಗೆ ಬಿಜೆಪಿಯ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಬೆದರಿಕೆ ಹಾಕುತ್ತಿರುವುದನ್ನು ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ ನಮ್ಮ ಕಾರ್ಯಕರ್ತರು ತಂಟೆಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಕುಂದಾಪುರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಮಂಡಲದ ನಿಕತಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುಧೀರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ, ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ ಶೆಟ್ಟಿ, ಕೋಟೇಶ್ವರ ಪಂಚಾಯತ್ ಅಧ್ಯಕ್ಷ ರಾಗಿಣಿ ದೇವಾಡಿಗ, ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…