ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.
ಮಂಗಳೂರು: ಕಾಲೇಜಿನಿಂದ ಟಿಸಿ ಹಿಂಪಡೆದ 145 ಮುಸ್ಲಿಂ ವಿದ್ಯಾರ್ಥಿನಿಯರು.. Vishwanews24
ಭಾನುವಾರ ಹೆಮ್ಮಾಡಿ ಸಮೀಪದಲ್ಲಿ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕೆ ಪೂರ್ಣಿಮಾ ಬಂದಿದ್ದರು. ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದು, ಪೂರ್ಣಿಮಾ ಕಾರ್ಯಕ್ರಮ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿ ತಮ್ಮತಾಯಿಗೆ ಮಾಹಿತಿ ನೀಡಿದ್ದರು. ರಾತ್ರಿ ಪತಿ ಪತ್ನಿ ಮಧ್ಯೆ ಜಗಳವಾಗಿ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಭಾನುವಾರ ರಾತ್ರಿಯಿಂದ ಸೊರಬದಲ್ಲಿ ನೆಲೆಸಿರುವ ಮಕ್ಕಳು ತಾಯಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಅನುಮಾನಗೊಂಡ ಪೂರ್ಣಿಮಾ ಅವರ ತಾಯಿ ಹೆಮ್ಮಾಡಿಯಲ್ಲಿರುವ ತಮ್ಮ ಸಂಬಂಧಿಕರಿಗೆ ಕರೆ ಮಾಡಿ ಮನೆಗೆ ಹೋಗಿ ನೋಡಿ ಬರುವಂತೆ ತಿಳಿಸಿದ್ದರು. ಸಂಬಂಧಿಕರು ರಾತ್ರಿ ಹೋಗಿ ನೋಡಿದಾಗ ಲೈಟ್ ಆಫ್ ಇದ್ದ ಕಾರಣ ಮಲಗಿರಬಹುದು ಎಂದು ಅಂದಾಜಿಸಿ ವಾಪಾಸಾಗಿದ್ದರು. ಆದರೆ ಬೆಳಿಗ್ಗೆಯೂ ಕರೆ ಸ್ವೀಕರಿಸದ ಹಿನ್ನೆಲೆ ಮತ್ತೆ ಹೋಗಿ ನೋಡಿದಾಗ ಬಾಗಿಲು ಲಾಕ್ ಆಗಿತ್ತು. ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ಪೂರ್ಣಿಮಾ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಬಳಿಕ ಹೆಂಚು ತೆಗೆದು ಒಳಗೆ ಹೋಗಿ ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.
ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ, ಸಿಪಿಐ ಗೋಪಿಕೃಷ್ಣ, ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…