Featured

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು – vishwanews24

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು

ಕುಂದಾಪುರ : ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ ಎಂಬುವರ ಮಗ ನಾಗೇಂದ್ರ (13) ಹಾಗೂ ಅಲ್ಲೇ ಸಮೀಪದ ನಿವಾಸಿ ಕಟ್ಟಡ ಸಾಮಾಗ್ರಿ ಪೂರೈಕೆ ಕೆಲಸ ಮಾಡಿಕೊಂಡಿರುವ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು ಶಾಲಿಯಾನ್ ಎಂಬುವರ ಮಗ ಶಾನು ಮೊಹಮದ್ ಶಫಾನ್ (13) ಸಾವನ್ನಪ್ಪಿದ ಬಾಲಕರು.

ಬೈಂದೂರು ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು. ಇಬ್ಬರೂ ಜೊತೆಗೆ ಕಲಿಯುತ್ತಿದ್ದು ಕಲಿಕೆಯಲ್ಲಿ ಸಾಧಾರಣವಾಗಿದ್ದರು. ಶಾಲೆಯಲ್ಲಿ ಈಗ ಪರೀಕ್ಷೆ ನಡೆಯುತ್ತಿದ್ದು ಮಂಗಳವಾರ ಇಂಗ್ಲಿಷ್ ಪರೀಕ್ಷೆ ಮುಗಿಸಿ ಮಧ್ಯಾಹ್ನ ಮನೆಗೆ ಬಂದು ಊಟ ಮಾಡಿದ ಬಳಿಕ ಸಂಜೆ 4 ಗಂಟೆ ಸುಮಾರಿಗೆ ನಾಗೇಂದ್ರ ಶಾನು ಮೊಹಮದ್ ಶಫಾನ್ ನ ಮನೆಗೆ ಬಂದು ಆತನನ್ನು ಕರೆದುಕೊಂಡು ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆ ಎಂಬ ಕೆರೆಯಲ್ಲಿ ಈಜಲು ಹೋಗಿದ್ದರು ಎನ್ನಲಾಗಿದೆ.

ರಾತ್ರಿಯಾದರೂ ವಿದ್ಯಾರ್ಥಿಗಳು ಮನೆಗೆ ಬಾರದೇ ಇದ್ದಾಗ ಕೆರೆ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಬಳಿ ಒಂದು ಸೈಕಲ್, ಬಟ್ಟೆ ಹಾಗೂ ಎರಡು ಜೊತೆ ಚಪ್ಪಲಿ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬುಧವಾರ ಬೆಳಿಗ್ಗೆ ಸುಮಾರು 01:30 ಗಂಟೆಗೆ ಶಾನು ಮೊಹಮದ್ ಶಫಾನ್ ಹಾಗೂ 02:25 ಗಂಟೆಗೆ ನಾಗೇಂದ್ರ ದೇವಾಡಿಗ ರವರ ಮೃತ ದೇಹ ಪತ್ತೆಯಾಗಿದೆ.

ಕೆರೆಕಟ್ಟೆ ಕೆರೆಯು ಮಧ್ಯದಲ್ಲಿ 40 ಅಡಿ ಹಾಗೂ ಸುತ್ತಲೂ 10-20 ಅಡಿ ಆಳವಿದೆ. ಈ ಕೆರೆಯಲ್ಲಿ ಪ್ರತಿ ದಿನ ಊರಿನವರು ಈಜಲು ಬರುತ್ತಿರುತ್ತಾರೆ. ಮಂಗಳವಾರ ದಿನ ಮಳೆ ಇದ್ದುದರಿಂದ ಯಾರು ಈಜಲು ಬಂದಿರಲಿಲ್ಲ ಎನ್ನಲಾಗಿದೆ. ಸರಿಯಾಗಿ ಈಜಲು ಬಾರದ ಇಬ್ಬರು ಈಜಲು ಹೋದಾಗ ಮುಳುಗಿ ಮೃತ ಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಇಬ್ಬರ ಮೃತ ದೇಹಗಳನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಡಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

3 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago