Featured

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು – vishwanews24

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು

ಕುಂದಾಪುರ : ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ ಎಂಬುವರ ಮಗ ನಾಗೇಂದ್ರ (13) ಹಾಗೂ ಅಲ್ಲೇ ಸಮೀಪದ ನಿವಾಸಿ ಕಟ್ಟಡ ಸಾಮಾಗ್ರಿ ಪೂರೈಕೆ ಕೆಲಸ ಮಾಡಿಕೊಂಡಿರುವ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು ಶಾಲಿಯಾನ್ ಎಂಬುವರ ಮಗ ಶಾನು ಮೊಹಮದ್ ಶಫಾನ್ (13) ಸಾವನ್ನಪ್ಪಿದ ಬಾಲಕರು.

ಬೈಂದೂರು ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು. ಇಬ್ಬರೂ ಜೊತೆಗೆ ಕಲಿಯುತ್ತಿದ್ದು ಕಲಿಕೆಯಲ್ಲಿ ಸಾಧಾರಣವಾಗಿದ್ದರು. ಶಾಲೆಯಲ್ಲಿ ಈಗ ಪರೀಕ್ಷೆ ನಡೆಯುತ್ತಿದ್ದು ಮಂಗಳವಾರ ಇಂಗ್ಲಿಷ್ ಪರೀಕ್ಷೆ ಮುಗಿಸಿ ಮಧ್ಯಾಹ್ನ ಮನೆಗೆ ಬಂದು ಊಟ ಮಾಡಿದ ಬಳಿಕ ಸಂಜೆ 4 ಗಂಟೆ ಸುಮಾರಿಗೆ ನಾಗೇಂದ್ರ ಶಾನು ಮೊಹಮದ್ ಶಫಾನ್ ನ ಮನೆಗೆ ಬಂದು ಆತನನ್ನು ಕರೆದುಕೊಂಡು ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆ ಎಂಬ ಕೆರೆಯಲ್ಲಿ ಈಜಲು ಹೋಗಿದ್ದರು ಎನ್ನಲಾಗಿದೆ.

ರಾತ್ರಿಯಾದರೂ ವಿದ್ಯಾರ್ಥಿಗಳು ಮನೆಗೆ ಬಾರದೇ ಇದ್ದಾಗ ಕೆರೆ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಬಳಿ ಒಂದು ಸೈಕಲ್, ಬಟ್ಟೆ ಹಾಗೂ ಎರಡು ಜೊತೆ ಚಪ್ಪಲಿ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬುಧವಾರ ಬೆಳಿಗ್ಗೆ ಸುಮಾರು 01:30 ಗಂಟೆಗೆ ಶಾನು ಮೊಹಮದ್ ಶಫಾನ್ ಹಾಗೂ 02:25 ಗಂಟೆಗೆ ನಾಗೇಂದ್ರ ದೇವಾಡಿಗ ರವರ ಮೃತ ದೇಹ ಪತ್ತೆಯಾಗಿದೆ.

ಕೆರೆಕಟ್ಟೆ ಕೆರೆಯು ಮಧ್ಯದಲ್ಲಿ 40 ಅಡಿ ಹಾಗೂ ಸುತ್ತಲೂ 10-20 ಅಡಿ ಆಳವಿದೆ. ಈ ಕೆರೆಯಲ್ಲಿ ಪ್ರತಿ ದಿನ ಊರಿನವರು ಈಜಲು ಬರುತ್ತಿರುತ್ತಾರೆ. ಮಂಗಳವಾರ ದಿನ ಮಳೆ ಇದ್ದುದರಿಂದ ಯಾರು ಈಜಲು ಬಂದಿರಲಿಲ್ಲ ಎನ್ನಲಾಗಿದೆ. ಸರಿಯಾಗಿ ಈಜಲು ಬಾರದ ಇಬ್ಬರು ಈಜಲು ಹೋದಾಗ ಮುಳುಗಿ ಮೃತ ಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಇಬ್ಬರ ಮೃತ ದೇಹಗಳನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಡಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago