ಕುಂದಾಪುರ: ಕೋಟದಲ್ಲಿ 2019ರ ಜನವರಿ 26ರಂದು ನಡೆದಿದ್ದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಗೆ ಹೈ ಕೋರ್ಟ್ ಜಾಮೀನು ದೊರೆಯುತ್ತಿದ್ದಂತೆ ಕೊಲೆಯಾದ ಭರತ್ನ ಬಡ ತಾಯಿ ಪಾರ್ವತಿ ದಿಟ್ಟವಾಗಿ ಸುಪ್ರೀಂ ಕೋರ್ಟಿನ ಕದ ತಟ್ಟಿದ್ದು, ಜಿಲ್ಲಾ ಪಂಚಾಯತ್ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ವಜಾಗೊಳಿಸಿ ಆದೇಶ ನೀಡಿದೆ.
ಅಂದು ನಡೆದ ಬರ್ಬರ ಹತ್ಯೆಗೆ ಇಡೀ ಕರಾವಳಿ ಮಾತ್ರವಲ್ಲ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಕರಾವಳಿಯಲ್ಲಿ ಮೊದಲ ಬಾರಿಗೆ ಹತ್ಯಾ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಪೊಲಿಸರು ಶಾಮೀಲಾಗಿದ್ದು ಬೆಳಕಿಗೆ ಬಂದ ಪ್ರಕರಣ ಇದಾಗಿತ್ತು. ಅಲ್ಲದೇ ಜಿಲ್ಲಾ ಪಂಚಾಯಿತಿ ಸದಸ್ಯರು ಕೊಲೆಗೆ ಸಂಚು ಹೂಡಿದ್ದರು ಎಂದು ಆರೋಪಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ರಾಘವೇಂದ್ರ ಕಾಂಚನ್ ಅವರನ್ನು ಆರೋಪಿಯನ್ನಾಗಿ ಮಾಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೆಳ ನ್ಯಾಯಾಲಯದಲ್ಲಿ ಜಾಮೀನು ದೊರೆಯದಿದ್ದ ಕಾರಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಹೈಕೋರ್ಟಿನ ಮೊರೆ ಹೋಗಿ ಅಲ್ಲಿ ಶರತ್ತು ಬದ್ದ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ಬಳಿಕ ಆರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಉಚ್ಛ ನ್ಯಾಯಾಲಯದಲ್ಲಿ ಜಾಮೀನು ದೊರಕುತ್ತಿದ್ದಂತೆ ಹತ್ಯೆಯಾದ ಭರತನ ತಾಯಿ ಪಾರ್ವತಿ, ಆರೋಪಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಪಾರ್ವತಿಯವರ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಜಾಮೀನು ವಜಾಗೊಳಿಸಿ ಆದೇಶ ನೀಡಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ. ಸುಪ್ರೀಂ ಕೋರ್ಟಿನಲ್ಲಿ ಸಂತ್ರಸ್ಥೆ ಪಾರ್ವತಿ ಪರ ಸುಪ್ರೀಂ ಕೋರ್ಟ್ ವಕೀಲ ಚಂದ್ರಶೇಖರ್ ವಾದ ಮಂಡಿಸಿದ್ದರು.
ಆ ಮೂಲಕ ಕರಾವಳಿಯ ಗ್ರಾಮೀಣ ಭಾಗದ ಕೊಲೆ ಪ್ರಕರಣವೊಂದು ರಾಜಕೀಯದ ಒತ್ತಡಗಳ ನಡುವೆಯೂ ಸರ್ವೋಚ್ಚ ನ್ಯಾಯಾಲಯದಲ್ಲಿ ತನಿಖೆಗೆ ಅಂಗೀಕಾರವಾಗಿ, ಸಂತ್ರಸ್ಥೆಗೆ ನ್ಯಾಯ ದೊರಕಿರುವುದು ಇದೇ ಮೊದಲು ಎನ್ನಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…