Featured

ಕುಂದಾಪುರ: ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ vishwanews24

ಕುಂದಾಪುರ: ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ

ಕುಂದಾಪುರ: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು, ಕೋಡಿಯ ಸೇತುವೆಯ ಮೇಲೆ ತನ್ನ ಸ್ಕೂಟಿಯನ್ನು ಇರಿಸಿ ನದಿಗೆ ಹಾರಿ ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ.

ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್ (32) ಎಂದು ಗುರುತಿಸಲಾಗಿದೆ. ಅವರ ಪತಿ ಇಕ್ಬಾಲ್ (36) ವಿದೇಶದಲ್ಲಿ ಉದ್ಯೋಗದಲ್ಲಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ವಾಸಿಸುತ್ತಿದ್ದರು.

ವರದಿಗಳ ಪ್ರಕಾರ, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದರು. ಬಳಿಕ ಅವರ ಸ್ಕೂಟಿ ಹಾಗೂ ಚಪ್ಪಲಿ ಕೋಡಿ ಸೇತುವೆಯ ಮೇಲೆ ಪತ್ತೆಯಾಗಿದೆ. ಹೀನಾ ಅವರು ನದಿಗೆ ಹಾರಿರಬಹುದು ಎಂದು ಶಂಕಿಸಲಾಗಿದೆ. ಜೊತೆಗೆ ಸ್ಕೂಟಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಘಟನೆ ಬಳಿಕ ಕುಂದಾಪುರ ಪೊಲೀಸರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಹಗಲಿಡೀ ನದಿಯಲ್ಲಿ ದೋಣಿಯ ಮೂಲಕ ಹುಡುಕಾಟ ನಡೆಸಲಾಯಿತು. ಆದರೆ ಇದುವರೆಗೂ ಮಹಿಳೆಯ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಹೀನಾ ಅವರ ತಾಯಿ ಸಾದಿಕಾ ಬಾನು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago