Featured

ಕುಂದಾಪುರ: ಕೌಟುಂಬಿಕ ಕಲಹ – ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪತಿ – vishwanews24

ಕುಂದಾಪುರ: ಕೌಟುಂಬಿಕ ಕಲಹ ; ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ  ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಹರೀಶ್ ಬೋವಿ(40) ಎಂದು ಗುರುತಿಸಲಾಗಿದೆ.

ಹರೀಶ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದ ಅವರು, ಇತ್ತೀಚೆಗೆ ಗಂಭೀರವಾಗಿದ್ದರು ಎನ್ನಲಾಗಿದೆ. ಆಗಾಗ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದರೆನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಜಗಳ ತಾರಕ್ಕೇರಿ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡಿದ್ದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಪಂಚಾಯಿತಿ ಮಾಡಿ ಆಟೋದಲ್ಲಿ ಕಳಿಸಿದ್ದರು. ಠಾಣೆಯಿಂದ ಬರುತ್ತಿದ್ದ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ.

ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು, ಪೊಲೀಸರು, ಅಗ್ನಿಶಾಮಕದಳ, ಮುಳುಗುತಜ್ಞರು ಹರೀಶ್ ಪತ್ತೆಗೆ ಶೋಧಕಾರ್ಯದಲ್ಲಿ ತೊಡಗಿದರು. ಆದರೆ ವಿಪರೀತ ಮಳೆ, ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲಿ ಪತ್ತೆ ಕಾರ್ಯ ಸಫಲವಾಗಿಲ್ಲ. ಹರೀಶ್ ಗೆ ಇಬ್ಬರು ಹೆಣ್ಣುಮಕ್ಕಳಿದ್ದು ಹಿರಿಮಗಳು ಮೂರನೇ ತರಗತಿ ಹಾಗೂ ಕಿರಿಯವಳು ಅಂಗನವಾಡಿಗೆ ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

15 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

19 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

27 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

55 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

1 hour ago