ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಹರೀಶ್ ಬೋವಿ(40) ಎಂದು ಗುರುತಿಸಲಾಗಿದೆ.
ಹರೀಶ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದ ಅವರು, ಇತ್ತೀಚೆಗೆ ಗಂಭೀರವಾಗಿದ್ದರು ಎನ್ನಲಾಗಿದೆ. ಆಗಾಗ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದರೆನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಜಗಳ ತಾರಕ್ಕೇರಿ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡಿದ್ದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಪಂಚಾಯಿತಿ ಮಾಡಿ ಆಟೋದಲ್ಲಿ ಕಳಿಸಿದ್ದರು. ಠಾಣೆಯಿಂದ ಬರುತ್ತಿದ್ದ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ.
ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು, ಪೊಲೀಸರು, ಅಗ್ನಿಶಾಮಕದಳ, ಮುಳುಗುತಜ್ಞರು ಹರೀಶ್ ಪತ್ತೆಗೆ ಶೋಧಕಾರ್ಯದಲ್ಲಿ ತೊಡಗಿದರು. ಆದರೆ ವಿಪರೀತ ಮಳೆ, ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲಿ ಪತ್ತೆ ಕಾರ್ಯ ಸಫಲವಾಗಿಲ್ಲ. ಹರೀಶ್ ಗೆ ಇಬ್ಬರು ಹೆಣ್ಣುಮಕ್ಕಳಿದ್ದು ಹಿರಿಮಗಳು ಮೂರನೇ ತರಗತಿ ಹಾಗೂ ಕಿರಿಯವಳು ಅಂಗನವಾಡಿಗೆ ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…