ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರದ ಹಂಗಳೂರು ಬಳಿ ಗುರುವಾರ ರಾತ್ರಿ ನಡೆದಿದೆ.
ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ (39) ಮೃತ ದುರ್ದೈವಿ.
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದ. ಕ. ಮೂಲದ ಯುವತಿ ಅರೆಸ್ಟ್ – vishwanews24
ಸುಂದರ ಅವರು ಕೋಟೇಶ್ವರ ಕಡೆಯಿಂದ ಬೈಕ್ ನಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹೆದ್ದಾರಿಯಿಂದ ಖಾಸಗಿ ಬಸ್ ಡಿಪೋಗೆ ತೆರಳುತ್ತಿದ್ದಾಗ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ನಂದಕುಮಾರ್ ಸಹಿತ ಪೊಲೀಸರು ಭೇಟಿ ನೀಡಿದರು. ಮೃತರು ಕಳೆದ 15 ವರ್ಷಗಳಿಂದ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದರು. 4 ತಿಂಗಳ ಹಿಂದಷ್ಟೇ ಖಾಯಂ ನೇಮಕಾತಿ ಆದೇಶ ಪಡೆದಿದ್ದರು ಎನ್ನಲಾಗಿದೆ.
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದ. ಕ. ಮೂಲದ ಯುವತಿ ಅರೆಸ್ಟ್ – vishwanews24
