Featured

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಆರೋಪ ; ವಿ. ಹೆಚ್.ಪಿ ಮತ್ತು ಬಜರಂಗದಳದಿಂದ ಮೀನು ಖರೀದಿಸುವ ಮೂಲಕ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ – Vishwanews24

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಆರೋಪ ; ವಿ. ಹೆಚ್.ಪಿ ಮತ್ತು ಬಜರಂಗದಳದಿಂದ ಮೀನು ಖರೀದಿಸುವ ಮೂಲಕ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ – Vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ ನೀಡಲು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡ ಮುಂದಾಗಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡದ ಪ್ರಮುಖರು ಹಾಗೂ ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮಂಗಳವಾರ ಮೀನು ಖರೀದಿಸಿ ಮಹಿಳಾ ಮೀನುಗಾರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರಾಮದ ಹಿಂದೂ ಸಮಾಜದವರು ಗಂಗೊಳ್ಳಿಗೆ ಬಂದು ಮೀನು ಖರೀದಿಸುವ ಕಾರ್ಯ ಮಾಡಲಿದ್ದಾರೆ. ಯಾವುದೇ ಕಾರಣಕ್ಕೂ ಮಹಿಳಾ ಮೀನುಗಾರರು ಎದೆಗುಂದಬಾರದು ಎಂದು ಮಹಿಳೆಯರಲ್ಲಿ ವಿಶ್ವಾಸ ತುಂಬಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್‍ನ ಕೇಂದ್ರಿಯ ವಿಶ್ವಸ್ಥ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ, ಗಂಗೊಳ್ಳಿಯಲ್ಲಿ ನಡೆದಿರುವ ವಿದ್ಯಮಾನದ ಬಳಿಕ ಅನ್ಯಕೋಮಿನವರು ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು ಖಂಡನೀಯ. ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಹೊಟ್ಟೆಪಾಡಿಗೆ, ದೈನಂದಿನ ಜೀವನ ನಡೆಸಲು ಮೀನು ಮಾರಾಟ ಮಾಡುತ್ತಿರುವ ಮೀನುಗಾರರಿಂದ ಒಂದೇ ಸಮನೆ ಮೀನು ಖರೀದಿಗೆ ಬಹಿಷ್ಕಾರ ಹಾಕುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಅನ್ಯಕೋಮಿನವರ ಆರ್ಥಿಕ ಬಹಿಷ್ಕಾರದ ಪ್ರಯತ್ನವನ್ನು ಧಿಕ್ಕರಿಸುವ ನಿಟ್ಟಿನಲ್ಲಿ, ಮಹಿಳಾ ಮೀನುಗಾರರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಯಾರೇ ಬಹಿಷ್ಕಾರ ಹಾಕಿದರೂ, ಯಾರೇ ದಾಳಿ ಮಾಡಿದರೂ ಕೂಡ ನಾವು ನಿರಂತರವಾಗಿ ಮಹಿಳ ಮೀನುಗಾರರಿಗೆ ಸಹಕಾರ ನೀಡುತ್ತೇವೆ. ನಿಮ್ಮೊಟ್ಟಿಗೆ ಬದುಕುತ್ತೇವೆ ಎಲ್ಲಾ ರೀತಿಯಲ್ಲಿ ಶಕ್ತಿಯನ್ನು ನೀಡುತ್ತೇವೆ ಎಂದು ಅವರು ಹೇಳಿದರು.

ಸಾವಿರಾರು ವರ್ಷಗಳಿಂದ ಇದೇ ರೀತಿಯಲ್ಲಿ ಬಹಿಷ್ಕಾರ ಹಾಕುತ್ತಾ ಇಡೀ ದೇಶಾದ್ಯಂತ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ. ಹಿಂದೂಗಳನ್ನು ರಾಷ್ಟ್ರದಿಂದ ಬೇರ್ಪಡಿಸುವ ಭಾಗವಾಗಿ ಷಡ್ಯಂತ್ರ ನಡೆದಿದೆ. ಈ ಷಡ್ಯಂತ್ರ ಇನ್ನು ಮುಂದೆ ಯಶಸ್ವಿಯಾಗುವುದಿಲ್ಲ. ಸಮಸ್ತ ಹಿಂದು ಜನಾಂಗ ಎಚ್ಚೆತ್ತುಕೊಂಡಿದೆ. ಈ ದೇಶದ ಯಾವುದೇ ಮೂಲೆಯಲ್ಲಿ ಹಿಂದು ಸಮಾಜದ ಮೇಲೆ ಅಕ್ರಮಣ ಅಥವಾ ಇಂತಹ ವಿಭಜನೆ ಶಕ್ತಿಗಳು ತಮ್ಮ ಕಾರ್ಯ ಚಟುವಟಿಕೆಗಳನ್ನು ತೋರಿಸಿದರೆ ಸಮಸ್ತ ದೇಶದ ಹಿಂದು ಸಮಾಜ ತಕ್ಕ ನೀಡಲು ಸಿದ್ಧವಾಗಿದೆ. ನಿಮ್ಮ ಯಾವುದೇ ಷಡ್ಯಂತ್ರ ವಿಫಲ ಮಾಡಲು ನಾವು ಸಿದ್ಧರಿದ್ದೇವೆ. ಇವತ್ತಿನವರೆಗೆ ನೀವು ನಮ್ಮ ವಿಶ್ವಾಸ ಇಟ್ಟುಕೊಂಡು ನಮ್ಮೊಟ್ಟಿಗೆ ಬದುಕುವ ನಾಟಕ ಮಾಡುತ್ತಾ ನಮ್ಮ ಎಲ್ಲಾ ವ್ಯಾಪಾರಿಗಳ ವ್ಯಾಪಾರವನ್ನು ಸೋಲಿಸುವ ಪ್ರಯತ್ನ ಮಾಡಿದ್ದೀರಿ ಎಂದು ಆರೋಪಿಸಿದ ಅವರು ನಾವು ಯಾವತ್ತೂ ಕೂಡ ಹಿಂದೂ ಸಮಾಜ ಮೀನುಗಾರರ ಪರವಾಗಿದ್ದೇವೆ ಎಂದು ಹೇಳಿದರು.

ವಿಹಿಂಪ ಕುಂದಾಪುರ ತಾಲೂಕು ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ಬಜರಂಗದಳ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ವಿಹಿಂಪ ಸಂಪರ್ಕ ಪ್ರಮುಖ್ ಗಿರೀಶ ಕುಂದಾಪುರ, ಬಜರಂಗದಳ ತಾಲೂಕು ಸಂಚಾಲಕ ಸುಧೀರ್, ತಾಲೂಕು ಮಠ ಮಂದಿರ ಪ್ರಮುಖ್ ಶ್ರೀನಿವಾಸ ಕುಂದರ್, ಬಿಎಂಎಸ್ ಗೌರವಾಧ್ಯಕ್ಷ ಕೆ.ಟಿ.ಸತೀಶ್, ಸಂಕೇತ್ ಕೊರ್ಗಿ, ವಿಹಿಂಪ ಮತ್ತು ಬಜರಂಗದಳ ಕಾರ್ಯಕರ್ತರು, ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago