Featured

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಆರೋಪ ; ವಿ. ಹೆಚ್.ಪಿ ಮತ್ತು ಬಜರಂಗದಳದಿಂದ ಮೀನು ಖರೀದಿಸುವ ಮೂಲಕ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ – Vishwanews24

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಆರೋಪ ; ವಿ. ಹೆಚ್.ಪಿ ಮತ್ತು ಬಜರಂಗದಳದಿಂದ ಮೀನು ಖರೀದಿಸುವ ಮೂಲಕ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ – Vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ ನೀಡಲು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡ ಮುಂದಾಗಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡದ ಪ್ರಮುಖರು ಹಾಗೂ ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮಂಗಳವಾರ ಮೀನು ಖರೀದಿಸಿ ಮಹಿಳಾ ಮೀನುಗಾರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರಾಮದ ಹಿಂದೂ ಸಮಾಜದವರು ಗಂಗೊಳ್ಳಿಗೆ ಬಂದು ಮೀನು ಖರೀದಿಸುವ ಕಾರ್ಯ ಮಾಡಲಿದ್ದಾರೆ. ಯಾವುದೇ ಕಾರಣಕ್ಕೂ ಮಹಿಳಾ ಮೀನುಗಾರರು ಎದೆಗುಂದಬಾರದು ಎಂದು ಮಹಿಳೆಯರಲ್ಲಿ ವಿಶ್ವಾಸ ತುಂಬಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್‍ನ ಕೇಂದ್ರಿಯ ವಿಶ್ವಸ್ಥ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ, ಗಂಗೊಳ್ಳಿಯಲ್ಲಿ ನಡೆದಿರುವ ವಿದ್ಯಮಾನದ ಬಳಿಕ ಅನ್ಯಕೋಮಿನವರು ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು ಖಂಡನೀಯ. ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಹೊಟ್ಟೆಪಾಡಿಗೆ, ದೈನಂದಿನ ಜೀವನ ನಡೆಸಲು ಮೀನು ಮಾರಾಟ ಮಾಡುತ್ತಿರುವ ಮೀನುಗಾರರಿಂದ ಒಂದೇ ಸಮನೆ ಮೀನು ಖರೀದಿಗೆ ಬಹಿಷ್ಕಾರ ಹಾಕುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಅನ್ಯಕೋಮಿನವರ ಆರ್ಥಿಕ ಬಹಿಷ್ಕಾರದ ಪ್ರಯತ್ನವನ್ನು ಧಿಕ್ಕರಿಸುವ ನಿಟ್ಟಿನಲ್ಲಿ, ಮಹಿಳಾ ಮೀನುಗಾರರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಯಾರೇ ಬಹಿಷ್ಕಾರ ಹಾಕಿದರೂ, ಯಾರೇ ದಾಳಿ ಮಾಡಿದರೂ ಕೂಡ ನಾವು ನಿರಂತರವಾಗಿ ಮಹಿಳ ಮೀನುಗಾರರಿಗೆ ಸಹಕಾರ ನೀಡುತ್ತೇವೆ. ನಿಮ್ಮೊಟ್ಟಿಗೆ ಬದುಕುತ್ತೇವೆ ಎಲ್ಲಾ ರೀತಿಯಲ್ಲಿ ಶಕ್ತಿಯನ್ನು ನೀಡುತ್ತೇವೆ ಎಂದು ಅವರು ಹೇಳಿದರು.

ಸಾವಿರಾರು ವರ್ಷಗಳಿಂದ ಇದೇ ರೀತಿಯಲ್ಲಿ ಬಹಿಷ್ಕಾರ ಹಾಕುತ್ತಾ ಇಡೀ ದೇಶಾದ್ಯಂತ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ. ಹಿಂದೂಗಳನ್ನು ರಾಷ್ಟ್ರದಿಂದ ಬೇರ್ಪಡಿಸುವ ಭಾಗವಾಗಿ ಷಡ್ಯಂತ್ರ ನಡೆದಿದೆ. ಈ ಷಡ್ಯಂತ್ರ ಇನ್ನು ಮುಂದೆ ಯಶಸ್ವಿಯಾಗುವುದಿಲ್ಲ. ಸಮಸ್ತ ಹಿಂದು ಜನಾಂಗ ಎಚ್ಚೆತ್ತುಕೊಂಡಿದೆ. ಈ ದೇಶದ ಯಾವುದೇ ಮೂಲೆಯಲ್ಲಿ ಹಿಂದು ಸಮಾಜದ ಮೇಲೆ ಅಕ್ರಮಣ ಅಥವಾ ಇಂತಹ ವಿಭಜನೆ ಶಕ್ತಿಗಳು ತಮ್ಮ ಕಾರ್ಯ ಚಟುವಟಿಕೆಗಳನ್ನು ತೋರಿಸಿದರೆ ಸಮಸ್ತ ದೇಶದ ಹಿಂದು ಸಮಾಜ ತಕ್ಕ ನೀಡಲು ಸಿದ್ಧವಾಗಿದೆ. ನಿಮ್ಮ ಯಾವುದೇ ಷಡ್ಯಂತ್ರ ವಿಫಲ ಮಾಡಲು ನಾವು ಸಿದ್ಧರಿದ್ದೇವೆ. ಇವತ್ತಿನವರೆಗೆ ನೀವು ನಮ್ಮ ವಿಶ್ವಾಸ ಇಟ್ಟುಕೊಂಡು ನಮ್ಮೊಟ್ಟಿಗೆ ಬದುಕುವ ನಾಟಕ ಮಾಡುತ್ತಾ ನಮ್ಮ ಎಲ್ಲಾ ವ್ಯಾಪಾರಿಗಳ ವ್ಯಾಪಾರವನ್ನು ಸೋಲಿಸುವ ಪ್ರಯತ್ನ ಮಾಡಿದ್ದೀರಿ ಎಂದು ಆರೋಪಿಸಿದ ಅವರು ನಾವು ಯಾವತ್ತೂ ಕೂಡ ಹಿಂದೂ ಸಮಾಜ ಮೀನುಗಾರರ ಪರವಾಗಿದ್ದೇವೆ ಎಂದು ಹೇಳಿದರು.

ವಿಹಿಂಪ ಕುಂದಾಪುರ ತಾಲೂಕು ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ಬಜರಂಗದಳ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ವಿಹಿಂಪ ಸಂಪರ್ಕ ಪ್ರಮುಖ್ ಗಿರೀಶ ಕುಂದಾಪುರ, ಬಜರಂಗದಳ ತಾಲೂಕು ಸಂಚಾಲಕ ಸುಧೀರ್, ತಾಲೂಕು ಮಠ ಮಂದಿರ ಪ್ರಮುಖ್ ಶ್ರೀನಿವಾಸ ಕುಂದರ್, ಬಿಎಂಎಸ್ ಗೌರವಾಧ್ಯಕ್ಷ ಕೆ.ಟಿ.ಸತೀಶ್, ಸಂಕೇತ್ ಕೊರ್ಗಿ, ವಿಹಿಂಪ ಮತ್ತು ಬಜರಂಗದಳ ಕಾರ್ಯಕರ್ತರು, ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

11 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago