ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಎರಡು ದಿನಗಳ ಬಳಿಕ ಗುರುವಾರ ಹೊರಬಿದ್ದಿದೆ. ಗುರುವಾರ ಬೆಳಗ್ಗಿನಿಂದಲೇ ಕುಂದಾಪುರದ ತಾಲೂಕು ಕಚೇರಿ ಮಿನಿ ವಿಧಾನಸೌಧದಲ್ಲಿ ನಡೆದ ಮತ ಎಣಿಕೆ ಕಾರ್ಯ ರಾತ್ರಿ ಅಂತ್ಯಗೊಂಡಿದೆ. ಬಿಜೆಪಿಯ ಭದ್ರಕೋಟೆಯಾಗಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಡಿಸೆಂಬರ್ 10ರಂದು ನಡೆದ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪರವಾಗಿ ಹೊರಬಿದ್ದಿದೆ.
ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಒಟ್ಟು 33 ಸ್ಥಾನಗಳ ಪೈಕಿ 19 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಪಡೆದುಕೊಂಡಿದ್ದಾರೆ. 12 ಸ್ಥಾನಗಳನ್ನು ಬಿಜೆಪಿ ತನ್ನ ವಶಕ್ಕೆ ಪಡೆದುಕೊಂಡಿದೆ. 2 ಸ್ಥಾನಗಳನ್ನು ಪಕ್ಷೇತರ ಅಭ್ಯರ್ಥಿಗಳು ಪಡೆದುಕೊಂಡಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತ್ ಆಡಳಿತದ ಗದ್ದುಗೆಯನ್ನು ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಅಧಿಕಾರ ಗೆದ್ದು ಕೊಂಡಂತಾಗಿದೆ.
1ನೇ ವಾರ್ಡಿನ ಒಟ್ಟು ಐದು ಸ್ಥಾನಗಳಲ್ಲಿ ಗುರುರಾಜ, ರೇಖಾ ಖಾರ್ವಿ ಸರೋಜಕೃಷ್ಣ ಪೂಜಾರಿ, ನಾಗರಾಜ ಖಾರ್ವಿ, ನಾಗರತ್ನ ಶೇರುಗಾರ್ ಗೆಲುವು ಸಾಧಿಸಿದ್ದಾರೆ. 2ನೇ ವಾರ್ಡಿನಲ್ಲಿ ತಬರೈಸ್, ಶರೀನಾ, ಅಬೂಬಕ್ಕರ್ ನಾಕುದಾ ಹಾಗೂ ರಜಬ್ ಗೆಲುವು ಸಾಧಿಸಿದ್ದಾರೆ. 3ನೇ ವಾರ್ಡಿನಲ್ಲಿ ದೀಪಾ, ಗೋಪಾಲ್ ಖಾರ್ವಿ, ಮಮತಾ ಎಸ್ ಗಾಣಿಗ, ಶ್ಯಾಮಲ ಶೆಣೈ ಗೆಲುವು ಸಾಧಿಸಿದರೆ 4ನೇ ವಾರ್ಡಿನಲ್ಲಿ ಮಹೇಶ್, ಅಮ್ಮು ಮೊಗೇರ್ತಿ ಶೋಭ ಕೃಷ್ಣ ಬಿಲ್ಲವ, ದೇವೇಂದ್ರ ಖಾರ್ವಿ ಗೆಲುವು ಸಾಧಿಸಿದ್ದಾರೆ.
5ನೇ ವಾರ್ಡಿನಲ್ಲಿ ಲಕ್ಷ್ಮಿ ಪೂಜಾರಿ, ಜನ್ಮ ಖಾರ್ವಿ, ಗಣೇಶ್ ಪೂಜಾರಿ, ಜಯೇಂದ್ರ ಖಾರ್ವಿ ಗೆದ್ದು ಬೀಗಿದರೆ, 6ನೇ ವಾರ್ಡಿನಲ್ಲಿ ಮಂಜುಳಾ ದೇವಾಡಿಗ, ಮ್ಯಾಕ್ಸಿಮ್ ಆಲ್ಬರ್ಟ್, ಫೆರ್ನಾಂಡಿಸ್, ಮೊಮಿನ್ ಸಮೀರ್ ಅಹ್ಮದ್ ಗೆಲುವು ಸಾಧಿಸಿದ್ದಾರೆ. 7ನೇ ವಾರ್ಡಿನಲ್ಲಿ ಸುರೇಖಾ ಕಾನೋಜಿ, ಶ್ರೀನಾಥ್ ಖಾರ್ವಿ, ರಿಯಾಜ್ ಅಹ್ಮದ್ ಹಾಗೂ 8ನೇ ವಾರ್ಡಿನಲ್ಲಿ ಚಂದ್ರ ಖಾರ್ವಿ, ಅಕ್ಕಮ್ಮ ಯು ಕುಮಾರ್, ಅಶ್ವಿನಿ ಖಾರ್ವಿ, ರಾಜೇಂದ್ರ ಗೆಲುವು ಸಾಧಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…