Featured

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ

ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ ಮುಳುಗಿದ್ದ ‘ಶ್ರೀ ಬಾಲಾಂಜನೇಯ’ ಮೀನುಗಾರಿಕಾ ದೋಣಿಯ ಅವಶೇಷಗಳು ಗುರುವಾರ ಕೋಟ ಪಡುಕೆರೆಯ ಹಂದಟ್ಟು ಸಮುದ್ರ ತೀರದಲ್ಲಿ ಪತ್ತೆಯಾಗಿವೆ.

ಬಲವಾದ ಅಲೆಗಳಿಗೆ ಸಿಲುಕಿ ಸಮುದ್ರದಲ್ಲಿ ಮುಳುಗಿದ್ದ ದೋಣಿ ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಅದರ ಅವಶೇಷಗಳು ಅಲೆಗಳ ರಭಸಕ್ಕೆ ದಡಕ್ಕೆ ಬಂದು ಕರಾವಳಿಯ ಒಂದು ಭಾಗದಲ್ಲಿ ಒಟ್ಟುಗೂಡಿವೆ. ಮಾಹಿತಿ ತಿಳಿದು ಗಂಗೊಳ್ಳಿ ಕರಾವಳಿ ಭದ್ರತಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಮೇಶ್ ಕೆ., ಸಬ್‌ಇನ್ಸ್‌ಪೆಕ್ಟರ್ ಸುಬ್ರಹ್ಮಣ್ಯ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಟ್ಕಳದ ಮುಂಡಳ್ಳಿಯ ನಾಗರಾಜ್ ಮೊಗೇರ್ ಅವರ ಮಾಲೀಕತ್ವದ ‘ಶ್ರೀ ಬಾಲಾಂಜನೇಯ’ ಪರ್ಸ್‌ಸೀನ್ ದೋಣಿ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಬಂದರಿನಿಂದ ಸ್ವಲ್ಪ ದೂರದಲ್ಲಿರುವ ನದೀಮುಖ ಪ್ರದೇಶದಲ್ಲಿ ದೋಣಿ ಬಲವಾದ ಅಲೆಗಳಿಗೆ ಸಿಲುಕಿ ಮುಳುಗಿತ್ತು. ದೋಣಿ ಅಪಾಯಕ್ಕೆ ಸಿಲುಕಿದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಮೀನುಗಾರರು ಹಾಗೂ ಗಂಗೊಳ್ಳಿ ಕರಾವಳಿ ಭದ್ರತಾ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ದೋಣಿಯಲ್ಲಿದ್ದ ಎಲ್ಲಾ 27 ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ದೋಣಿ ಮುಳುಗಿದ ವೇಳೆ ಅದರಲ್ಲಿದ್ದ ಮೀನುಗಾರಿಕಾ ಬಲೆಗಳು ಹಾಗೂ ಇತರ ಉಪಕರಣಗಳು ಸಮುದ್ರದಲ್ಲಿ ಕೊಚ್ಚಿಹೋಗಿವೆ. ಇದೀಗ ದೋಣಿಯ ಅವಶೇಷಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ನಷ್ಟದ ಪ್ರಮಾಣದ ಕುರಿತು ಪರಿಶೀಲನೆ ನಡೆಯುತ್ತಿದೆ.

Vishwa News 24

Recent Posts

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

6 minutes ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

15 minutes ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

33 minutes ago

ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ – vishwanews24

ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…

53 minutes ago

ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ – vishwanews24

 ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ      ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…

2 hours ago

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ   ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24)…

2 hours ago