ಕುಂದಾಪುರ: ಶೆಡ್’ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು ಈ ವೇಳೆ ಓರದವ ಪರಾರಿಯಾಗಿದ್ದಾನೆ. ಜಪ್ತಿ ಗ್ರಾಮದ ಇಂಬಾಳಿ ಎಂಬಲ್ಲಿ ಈ ಘಟನೆ ನಡೆದಿದೆ.
ಕಂಡ್ಲೂರು ನಿವಾಸಿಗಳಾದ ಕರಾಣಿ ಮಹಮ್ಮದ್ ನದೀಮ್(25), ಬೆಟ್ಟಿ ಮಹಮ್ಮದ್ ಅಫ್ಜಲ್ (28) ಬಂಧಿತ ಆರೋಪಿಗಳಾಗಿದ್ದು ರಯಾನ್ ಎಂಬಾತ ಪರಾರಿಯಾಗಿದ್ದಾನೆ.
ಗ್ರಾಮಾಂತರ ಠಾಣೆ ಪೊಲೀಸ್ ಉಪನಿರೀಕ್ಷಕ ರಾಜ್ ಕುಮಾರ್ ಅವರಿಗೆ ಜಪ್ತಿಗ್ರಾಮದ ಇಂಬಾಳಿಯಲ್ಲಿರುವ ವ್ಯಕ್ತಿಯೊಬ್ಬರ ಶೆಡ್ಡಿನಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಬಂದಿದ್ದು ಈ ವೇಳೆ ದಾಳಿ ನಡೆಸಿ ಆರೋಪಿತರಾದ ಕರಾಣಿ ಮಹಮ್ಮದ್ ನದೀಮ್ ಹಾಗೂ ಬೆಟ್ಟಿ ಮಹಮ್ಮದ್ ಅಫ್ಜಲ್ ರನ್ನು ಬಂಧಿಸಿದ್ದು ಸ್ಥಳದಲ್ಲಿದ್ದ ಇನ್ನೊಬ್ಬ ಆರೋಪಿಯಾದ ರಯಾನನು ತಪ್ಪಿಸಿಕೊಂಡಿದ್ದಾನೆ. ಆರೋಪಿಗಳ ಬಳಿ ಇದ್ದ 360 ಗ್ರಾಂ ತೂಕದ ಗಾಂಜಾ (ಸುಮಾರು 8000/- ಮೌಲ್ಯ) ಹಾಗೂ 2 ಬೈಕ್, ಎರಡು ಮೊಬೈಲನ್ನು ವಶಕ್ಕೆ ಪಡೆಯಲಾಗಿದೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…