ಕುಂದಾಪುರ: ಶೆಡ್’ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು ಈ ವೇಳೆ ಓರದವ ಪರಾರಿಯಾಗಿದ್ದಾನೆ. ಜಪ್ತಿ ಗ್ರಾಮದ ಇಂಬಾಳಿ ಎಂಬಲ್ಲಿ ಈ ಘಟನೆ ನಡೆದಿದೆ.
ಕಂಡ್ಲೂರು ನಿವಾಸಿಗಳಾದ ಕರಾಣಿ ಮಹಮ್ಮದ್ ನದೀಮ್(25), ಬೆಟ್ಟಿ ಮಹಮ್ಮದ್ ಅಫ್ಜಲ್ (28) ಬಂಧಿತ ಆರೋಪಿಗಳಾಗಿದ್ದು ರಯಾನ್ ಎಂಬಾತ ಪರಾರಿಯಾಗಿದ್ದಾನೆ.
ಗ್ರಾಮಾಂತರ ಠಾಣೆ ಪೊಲೀಸ್ ಉಪನಿರೀಕ್ಷಕ ರಾಜ್ ಕುಮಾರ್ ಅವರಿಗೆ ಜಪ್ತಿಗ್ರಾಮದ ಇಂಬಾಳಿಯಲ್ಲಿರುವ ವ್ಯಕ್ತಿಯೊಬ್ಬರ ಶೆಡ್ಡಿನಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಬಂದಿದ್ದು ಈ ವೇಳೆ ದಾಳಿ ನಡೆಸಿ ಆರೋಪಿತರಾದ ಕರಾಣಿ ಮಹಮ್ಮದ್ ನದೀಮ್ ಹಾಗೂ ಬೆಟ್ಟಿ ಮಹಮ್ಮದ್ ಅಫ್ಜಲ್ ರನ್ನು ಬಂಧಿಸಿದ್ದು ಸ್ಥಳದಲ್ಲಿದ್ದ ಇನ್ನೊಬ್ಬ ಆರೋಪಿಯಾದ ರಯಾನನು ತಪ್ಪಿಸಿಕೊಂಡಿದ್ದಾನೆ. ಆರೋಪಿಗಳ ಬಳಿ ಇದ್ದ 360 ಗ್ರಾಂ ತೂಕದ ಗಾಂಜಾ (ಸುಮಾರು 8000/- ಮೌಲ್ಯ) ಹಾಗೂ 2 ಬೈಕ್, ಎರಡು ಮೊಬೈಲನ್ನು ವಶಕ್ಕೆ ಪಡೆಯಲಾಗಿದೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…