ಕುಂದಾಪುರ: ಟೈಯರ್ ಪಂಚರ್ ಶಾಪ್ ಒಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟೈಯರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.
ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ತಿಳಿದುಬಂದಿದೆ.
ಖಾಸಗಿ ಶಾಲೆ ಬಸ್ಸೊಂದರ ಟೈಯರ್ ಪ್ಯಾಚ್ ಗೆಂದು ಬಂದಿದ್ದು ಟಯರನ್ನು ಕೆಳಗಿಳಿಸಿ ಗಾಳಿ ತುಂಬುವಾಗ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡಿದೆ.
ಈ ಸಂದರ್ಭ ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟಗೊಂಡ ಟೈಯರ್ ನ ಸಿಡಿತಕ್ಕೆ ಮೇಲಕ್ಕೆ ಎಸೆಯಲ್ಪಟ್ಟಿದ್ದಾನೆ.
ಟೈಯರ್ ಸ್ಪೋಟಗೊಂಡ ಬಳಿಕ ಟೈಯರ್ ಡ್ರಮ್ ಬಸ್ಸಿನ ಮೇಲ್ಚಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯವೊಂದರ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…