ಕುಂದಾಪುರ : ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹೆಮ್ಮಾಡಿ-ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಬಳಿ ಶನಿವಾರ ನಡೆದಿದೆ.
ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಎಂಬುವರಿಗೆ ಸೇರಿದ ಕಾರು ಇದಾಗಿದೆ. ಅವರು ಕೆಲಸದ ನಿಮಿತ್ತ ಆಲೂರಿಗೆ ತೆರಳಿ ವಾಪಸ್ ಕುಂದಾಪುರದ ಕಡೆಗೆ ಬರುತ್ತಿದ್ದಾಗ, ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಕಾರಿನ ಮುಂಭಾಗದಲ್ಲಿ ದೊಡ್ಡ ಶಬ್ದದೊಂದಿಗೆ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಭಾಸ್ಕರ್ ಆಚಾರ್ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ.
ಭಾಸ್ಕರ್ ಅವರು ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಬೆಂಕಿಯು ಹರಡಿದೆ. ಸ್ಥಳೀಯರು ತಕ್ಷಣ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಚಾಲಕ ಸಮಯಪ್ರಜ್ಞೆಯಿಂದ ಕೂಡಲೇ ಕೆಳಗಿಳಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕೊಲ್ಲೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…