ಕುಂದಾಪುರ: ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದ ಪರಿಣಾಮ ಪಿಕಪ್ ವಾಹನ ಸಂಪೂರ್ಣ ಹಾನಿಗೀಡಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಕಾಳವರ ಗ್ರಾಮದ ಕಟ್ಕೇರಿ ಶಾಲೆ ಸಮೀಪ ನಡೆದಿದೆ.
ಗಾಯಗೊಂಡು ಆಸ್ಪತ್ರೆಗೆ ಸೇರಿದ ಚಾಲಕನನ್ನು ಆನಗಳ್ಳಿಯ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.
ಚಾಲಕ ಹರೀಶ್ ತನ್ನ ಪತ್ನಿ ಮನೆಯಾದ ಸಳ್ವಾಡಿಯಿಂದ ಬೆಳಿಗ್ಗೆ ತಮ್ಮ ಪಿಕಪ್ ವಾಹನದಲ್ಲಿ ಮಲ್ಪೆಗೆ ಮೀನು ತರಲೆಂದು ಹೊರಟಿದ್ದರು ಎನ್ನಲಾಗಿದೆ. ಕಾಳಾವರ ಗ್ರಾಮದ ಕಟ್ಕೇರಿ ಎಂಬಲ್ಲಿ ಬರುತ್ತಿದ್ದಂತೆ ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಬೃಹತ್ ಮರ ಅಡ್ಡಲಾಗಿ ಬಿದ್ದಿದೆ. ಪರಿಣಾಮ ಪಿಕ್ ಅಪ್ ವಾಹನದ ಮೇಲ್ಭಾಗ ನುಜ್ಜು ಗುಜ್ಜಾಗಿದೆ.
ತಕ್ಷಣವೇ ಸ್ಥಳೀಯರು ಸೇರಿ ರಸ್ತೆಗೆ ಬಿದ್ದ ಮರ ತೆರವುಗೊಳಿಸುವ ಪ್ರಕ್ರಿಯೆ ನಡೆಸಿದ್ದಾರೆ.
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…