Featured

ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಕ್ರೇನ್ ಡಿಕ್ಕಿ: ಸಹಸವಾರ ಸ್ಥಳದಲ್ಲೇ ಮೃತ್ಯು -Vishwanews24

ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಕ್ರೇನ್ ಡಿಕ್ಕಿ: ಸಹಸವಾರ ಸ್ಥಳದಲ್ಲೇ ಮೃತ್ಯು

ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಕ್ರೇನ್ ವೊಂದು ಡಿಕ್ಕಿ ಹೊಡೆದು ಸಹಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆಯ ಶ್ರೀನಿವಾಸ ಕಾಂಪ್ಲೆಕ್ಸ್ ಬಳಿ ನಡೆದಿದೆ.

ಸ್ಥಳೀಯ ನಿವಾಸಿ ಪ್ರಶಾಂತ ಮೊಗವೀರ ಮೃತಪಟ್ಟವರು. ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಸವಾರ ದಿನೇಶ್ ಪೂಜಾರಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ಮಧ್ಯಾಹ್ನದ ವೇಳೆ ದಿನೇಶ್ ಪೂಜಾರಿ ಹಾಗೂ ಪ್ರಶಾಂತ್ ಅವರು ಬೈಕ್ ನಲ್ಲಿ ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅದೇ ದಿಕ್ಕಿನಲ್ಲಿ ನೋಂದಣಿ ಇಲ್ಲದ ಹೊಸ ಕ್ರೇನ್ ಅನ್ನು ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದ ಅದರ ಚಾಲಕ, ಪ್ರಶಾಂತ್ ಸಹ ಸವಾರನಾಗಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್ ಸಮೇತ ಇಬ್ಬರು ಸವಾರರು ರಸ್ತೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ನಡೆಸಿದ ಕ್ರೇನ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ದಿನೇಶ್ ಪೂಜಾರಿ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago