ಕುಂದಾಪುರ: ಚಾಲಕನ ನಿದ್ದೆಗಣ್ಣಿನಿಂದ ನಿಯಂತ್ರಣ ತಪ್ಪಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರು ಸಮೀಪ ಇರುವ ಸಹನಾ ಕನ್ವೆನ್ಶನ್ ಸೆಂಟರ್ ಸಮೀಪ ರಸ್ತೆ ಬಿಟ್ಟು ಡಿವೈಡರ್ ಏರಿ ಸರ್ವಿಸ್ ರಸ್ತೆಗೆ ಮಗುಚಿ ಕೊಂಡ ಘಟನೆ ಮಂಗಳವಾರ ಬೆಳಿಗ್ಗಿನ ಜಾವ ಸುಮಾರು ಎರಡು ಗಂಟೆಗೆ ನಡೆದಿದೆ.
ಘಟನೆಯಲ್ಲಿ ಲಾರಿ ಮಗುಚಿ ಬಿದ್ದಿದ್ದು, ರಸ್ತೆ ಸಂಚಾರ ವಿರಳವಾಗಿದ್ದುದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಲಾರಿಯು ಮಂಗಳೂರಿನ ಕಾಟಿಪಳ್ಳ ಸಮೀಪದ ಕುತ್ತೆತ್ತೂರು ಎಂಬಲ್ಲಿಂದ ಎಂಆರ್ಪಿಎಲ್ ಕಂಪನಿಯಿಂದ ಲಕ್ಷಾಂತರ ಮೌಲ್ಯದ ಮ್ಯಾಂಗ್ಪೋಲ್ ಪಾಲಿಪ್ರೊಫೈಲೀನ್ ಎನ್ನುವ ಪ್ಲಾಸ್ಟಿಕ್ ಕಚ್ಚಾ ವಸ್ತುವನ್ನು ತುಂಬಿಕೊಂಡು ಮಹಾರಾಷ್ಟ್ರದ ಕಡೆಗೆ ಪ್ರಯಾಣಿಸುತ್ತಿತ್ತು.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಮಗುಚಿ ಬಿದ್ದ ಲಾರಿಯನ್ನು ಮೇಲೆತ್ತಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…