Featured

ಕುಂದಾಪುರ: ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ಮುಂದುವರಿದ ಬೈಂದೂರು ಶಾಸಕರ ಧರಣಿ; ಜಿಲ್ಲೆಯ ಶಾಸಕರ ಬೆಂಬಲ – vishwanews24

ಕುಂದಾಪುರ: ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ಮುಂದುವರಿದ ಬೈಂದೂರು ಶಾಸಕರ ಧರಣಿ; ಜಿಲ್ಲೆಯ ಶಾಸಕರ ಬೆಂಬಲ

ಕುಂದಾಪುರ: ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸೋಮವಾರ ಸಂಜೆಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಆರಂಭಿಸಿದ ಅಹೋರಾತ್ರಿ ಧರಣಿಗೆ ಉಡುಪಿ ಜಿಲ್ಲೆಯ ಕುಂದಾಪುರ, ಕಾಪು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸೋಮವಾರ ರಾತ್ರಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿಯವರು ತಡರಾತ್ರಿ ಆಗಮಿಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋ‌ರ್ ಕುಮಾ‌ರ್ ಕುಂದಾಪುರ, ಬಿಜೆಪಿಯ ಹಿರಿಯ ಮುಖಂಡ ರಾಜೇಶ್ ಕಾವೇರಿ, ಬೈಂದೂರು ಬಿಜೆಪಿ‌ಮಂಡಲದ ಅಧ್ಯಕ್ಷ‌ ದೀಪಕ್ ಕುಮಾರ್ ಶೆಟ್ಟಿ, ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಗೋಪಾಡಿ ಮೊದಲಾದವರಿದ್ದರು.

ರಾತ್ರಿಯಿಡೀ ನಡೆದ ಧರಣಿ ಸತ್ಯಾಗ್ರಹದಲ್ಲಿ ಬೈಂದೂರಿನ ನೂರಾರು ಬಿಜೆಪಿ ಕಾರ್ಯಕರ್ತರು ಶಾಸಕ ಗುರುರಾಜ್ ಗಂಟಿಹೊಳೆಯವರ ಧರಣಿಗೆ ಕೈ ಜೋಡಿಸಿದರು. ಮಂಗಳವಾರವೂ ಧರಣಿ ಮುಂದುವರಿದಿದ್ದು ಡಿಸಿ ಹಾಗೂ ಎಸ್ಪಿ ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago