Featured

ಕುಂದಾಪುರ: ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ , ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಲ್ಲರೆ ಮನೋಭಾವದ ವ್ಯಕ್ತಿ ನಾನಲ್ಲ:  ಸುಕುಮಾರ್ ಶೆಟ್ಟಿ – Vishwanews24

ಕುಂದಾಪುರ: ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ ..

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಲ್ಲರೆ ಮನೋಭಾವದ ವ್ಯಕ್ತಿ ನಾನಲ್ಲ:  ಸುಕುಮಾರ್ ಶೆಟ್ಟಿ

ಕುಂದಾಪುರ: ನಾನು ನೂರಕ್ಕೆ ನೂರು ಬಿಜೆಪಿ. ಅದರಲ್ಲಿ ಸಂಶಯವೇ ಬೇಡ. ಅವಕಾಶ ಕೊಡದಕ್ಕೆ ಬೇಸರವಿಲ್ಲ. ನನಗೆ ಇಷ್ಟೇ ಯೋಗ. ಮಾಡಿದ ಕೆಲಸಕ್ಕೆ ತೃಪ್ತಿಯಿದೆ. ಆದರೆ ಪಕ್ಷ ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ. ಬೆಂಬಲ ನೀಡುವ ಬಗ್ಗೆ ಕಾರ್‍ಯಕರ್ತರು, ಹಿತೈಷಿಗಳೊಂದಿಗೆ ಚರ್ಚಿಸಿ ಇನ್ನೆರಡು ದಿನದಲ್ಲಿ ನನ್ನ ನಿಲುವು ಏನು ಅನ್ನುವುದನ್ನು ತಿಳಿಸುವೆ ಎಂದು ಬಂದೂರಿನ ಹಾಲಿ ಶಾಸಕ, ಟಿಕೆಟ್ ವಂಚಿತ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.

ಟಿಕೆಟ್ ಕೈತಪ್ಪಿದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಇಲ್ಲ ಅನ್ನುವುದನ್ನು3 ತಿಂಗಳು ಮೊದಲೇ ಹೇಳಬಹುದಿತ್ತು. ನಡ್ಡಾ, ಸಿಎಂ ಕಾರ್‍ಯಕ್ರಮಕ್ಕೆ ಸಹಸ್ರಾರು ಮಂದಿಯನ್ನು ಸೇರಿಸಿದ್ದೇನೆ. ಜನ ಸೇರಿಸುವ ಕೆಲಸ ಅಷ್ಟು ಸುಲಭವಲ್ಲ. ಮಾಜಿ ಸಿಎಂಗಳಾದ ಹೆಚ್ಡಿಕೆ ಕರೆ ಮಾಡಿ ಬನ್ನಿ ಎಂದಿದ್ದರು. ಆದರೆ ನಾನು ಬರುವುದಿಲ್ಲ ಅಂದಿದ್ದೇನೆ. ಬಿಎಸ್‌ವೈ ಹಾಗೂ ಸಿಎಂ ಬೊಮ್ಮಾಯಿ ಕರೆ ಮಾಡಿ, ನಾವು ನಿಮ್ಮೊಂದಿಗಿದ್ದೇವೆ. ಟಿಕೆಟಿಗಾಗಿ ನಾವು ಪ್ರಯತ್ನಿಸಿದ್ದು, ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ತಿಳಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವಷ್ಟು ಚಿಲ್ಲರೆ ಜನ ಅಲ್ಲ. ವಿರೋಧವಂತೂ ಮಾಡುವುದಿಲ್ಲ. ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದಿದ್ದಾರೆ.

5 ವರ್ಷ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. 2013 ರಲ್ಲಿ ಸೋತಾಗ 15 ದಿನಗಳ ಹಿಂದೆಯಷ್ಟೇ ಟಿಕೆಟ್ ನೀಡಿದ್ದರೂ, ಹೋರಾಟ ಮಾಡಿದ್ದೇನೆ. ಆ ಬಳಿಕದ 5 ವರ್ಷ ಕ್ಷೇತ್ರದಾದ್ಯಂತ ಓಡಾಟ ಮಾಡಿ, ಪಕ್ಷವನ್ನು ಸಂಘಟಿಸಿ, ಪ್ರಬಲವಾಗಿಸಿ, ಲೋಕಸಭೆ, ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಗಳಲ್ಲಿ ಪಕ್ಷದ ಹೆಚ್ಚಿನ ಬೆಂಬಲಿತರು ಗೆಲ್ಲುವಲ್ಲಿ ಶ್ರಮಿಸಿದ್ದೇನೆ.

ಪಕ್ಷದ ಪ್ರಮುಖರಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜೆಡ್ಡು, ಹರ್ಕೂರು ಮಂಜಯ್ಯ ಶೆಟ್ಟಿ, ಆನಂದ ಖಾರ್ವಿ ಉಪ್ಪುಂದ, ಪತ್ರಿಕಾಗೋಷ್ಠಿಯಲ್ಲಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago