Featured

ಕುಂದಾಪುರ: ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ , ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಲ್ಲರೆ ಮನೋಭಾವದ ವ್ಯಕ್ತಿ ನಾನಲ್ಲ:  ಸುಕುಮಾರ್ ಶೆಟ್ಟಿ – Vishwanews24

ಕುಂದಾಪುರ: ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ ..

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಲ್ಲರೆ ಮನೋಭಾವದ ವ್ಯಕ್ತಿ ನಾನಲ್ಲ:  ಸುಕುಮಾರ್ ಶೆಟ್ಟಿ

ಕುಂದಾಪುರ: ನಾನು ನೂರಕ್ಕೆ ನೂರು ಬಿಜೆಪಿ. ಅದರಲ್ಲಿ ಸಂಶಯವೇ ಬೇಡ. ಅವಕಾಶ ಕೊಡದಕ್ಕೆ ಬೇಸರವಿಲ್ಲ. ನನಗೆ ಇಷ್ಟೇ ಯೋಗ. ಮಾಡಿದ ಕೆಲಸಕ್ಕೆ ತೃಪ್ತಿಯಿದೆ. ಆದರೆ ಪಕ್ಷ ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ. ಬೆಂಬಲ ನೀಡುವ ಬಗ್ಗೆ ಕಾರ್‍ಯಕರ್ತರು, ಹಿತೈಷಿಗಳೊಂದಿಗೆ ಚರ್ಚಿಸಿ ಇನ್ನೆರಡು ದಿನದಲ್ಲಿ ನನ್ನ ನಿಲುವು ಏನು ಅನ್ನುವುದನ್ನು ತಿಳಿಸುವೆ ಎಂದು ಬಂದೂರಿನ ಹಾಲಿ ಶಾಸಕ, ಟಿಕೆಟ್ ವಂಚಿತ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.

ಟಿಕೆಟ್ ಕೈತಪ್ಪಿದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಇಲ್ಲ ಅನ್ನುವುದನ್ನು3 ತಿಂಗಳು ಮೊದಲೇ ಹೇಳಬಹುದಿತ್ತು. ನಡ್ಡಾ, ಸಿಎಂ ಕಾರ್‍ಯಕ್ರಮಕ್ಕೆ ಸಹಸ್ರಾರು ಮಂದಿಯನ್ನು ಸೇರಿಸಿದ್ದೇನೆ. ಜನ ಸೇರಿಸುವ ಕೆಲಸ ಅಷ್ಟು ಸುಲಭವಲ್ಲ. ಮಾಜಿ ಸಿಎಂಗಳಾದ ಹೆಚ್ಡಿಕೆ ಕರೆ ಮಾಡಿ ಬನ್ನಿ ಎಂದಿದ್ದರು. ಆದರೆ ನಾನು ಬರುವುದಿಲ್ಲ ಅಂದಿದ್ದೇನೆ. ಬಿಎಸ್‌ವೈ ಹಾಗೂ ಸಿಎಂ ಬೊಮ್ಮಾಯಿ ಕರೆ ಮಾಡಿ, ನಾವು ನಿಮ್ಮೊಂದಿಗಿದ್ದೇವೆ. ಟಿಕೆಟಿಗಾಗಿ ನಾವು ಪ್ರಯತ್ನಿಸಿದ್ದು, ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ತಿಳಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವಷ್ಟು ಚಿಲ್ಲರೆ ಜನ ಅಲ್ಲ. ವಿರೋಧವಂತೂ ಮಾಡುವುದಿಲ್ಲ. ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದಿದ್ದಾರೆ.

5 ವರ್ಷ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. 2013 ರಲ್ಲಿ ಸೋತಾಗ 15 ದಿನಗಳ ಹಿಂದೆಯಷ್ಟೇ ಟಿಕೆಟ್ ನೀಡಿದ್ದರೂ, ಹೋರಾಟ ಮಾಡಿದ್ದೇನೆ. ಆ ಬಳಿಕದ 5 ವರ್ಷ ಕ್ಷೇತ್ರದಾದ್ಯಂತ ಓಡಾಟ ಮಾಡಿ, ಪಕ್ಷವನ್ನು ಸಂಘಟಿಸಿ, ಪ್ರಬಲವಾಗಿಸಿ, ಲೋಕಸಭೆ, ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಗಳಲ್ಲಿ ಪಕ್ಷದ ಹೆಚ್ಚಿನ ಬೆಂಬಲಿತರು ಗೆಲ್ಲುವಲ್ಲಿ ಶ್ರಮಿಸಿದ್ದೇನೆ.

ಪಕ್ಷದ ಪ್ರಮುಖರಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜೆಡ್ಡು, ಹರ್ಕೂರು ಮಂಜಯ್ಯ ಶೆಟ್ಟಿ, ಆನಂದ ಖಾರ್ವಿ ಉಪ್ಪುಂದ, ಪತ್ರಿಕಾಗೋಷ್ಠಿಯಲ್ಲಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

6 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

7 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

7 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

7 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

7 hours ago