Featured

ಕುಂದಾಪುರ : ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಮತಯಾಚನೆ – vishwanews24

ಕುಂದಾಪುರ : ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಮತಯಾಚನೆ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಪ್ರತಿಷ್ಠಿತ ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಶ್ರೀ ಎಸ್. ಎಲ್ . ಭೋಜೆಗೌಡ ಮತ್ತು ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಅವರು ಮತಯಾಚಿಸಿದರು .

ಈ ಸಂಧರ್ಭದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ದೇಶದ ಭದ್ರತೆಗೆ, ಸುಭದ್ರತೆಗೆ ದಿಟ್ಟ ಉತ್ತರ ಎಂದರೆ ಅದು ಭಾರತೀಯ ಜನತಾ ಪಾರ್ಟಿ , ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್. ಎಲ್ .‌ ಭೋಜೇಗೌಡರು ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಯಾದ ನಾನು ಸ್ಪರ್ದಿಸುತ್ತಿದ್ದೇವೆ , ನೀವೆಲ್ಲರೂ ನಮ್ಮಬ್ಬಿರ ಪರವಾಗಿ ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರ ಬಳಿ ಮತಯಾಚಿಸಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕುಂದಾಪುರದ ಪ್ರತಿಷ್ಠಿತ ಡಾ. ಬಿ. ಬಿ.ಹೆಗಡೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ , ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ ಎಸ್ , ಸತೀಶ್ ಪೂಜಾರಿ ವಕ್ವಾಡಿ , ಉಡುಪಿ ಜಿಲ್ಲಾ ಉಪಾಧ್ಯಕ್ಶರಾದ ಸುರೇಶ್ ಶೆಟ್ಟಿ ಕಾಡೂರು,ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿ ಶೆಟ್ಟಿ , ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ , ಸುಪ್ರದ ಶೆಟ್ಟಿ , ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್ .ಮಾಲತೇಶ್ , ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago