ಕುಂದಾಪುರ: ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ.
ವಕ್ವಾಡಿಯ ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣದ ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ ಪೈಕಿ ಪೊಲೀಸರು ಆದರ್ಶ (33) ಹಾಗೂ ಗೋವರ್ಧನ್ (32) ಎಂಬುವವರನ್ನು ಬಂಧಿಸಿದ್ದಾರೆ. ಗಣೇಶ್ ಕುಂಭಾಶಿ (28) ಹಾಗೂ ಎಡ್ವರ್ಡ್ (25) ಸೇರಿದಂತೆ ಇತರರು ತಲೆಮರೆಸಿಕೊಂಡಿದ್ದು ಕುಂದಾಪುರ ನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ವಕ್ವಾಡಿ, ಗೋಪಾಡಿ, ಕುಂಭಾಶಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಗಾಂಜಾ ಮತ್ತು ಡ್ರಗ್ಸ್ ಚಟುವಟಿಕೆಗಳು ನಡೆಯುತ್ತಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಹಲವಾರು ಹಲ್ಲೆ, ಮಾರಣಾಂತಿಕ ದಾಳಿ, ಕೊಲೆ ಬೆದರಿಕೆ, ಅತ್ಯಾಚಾರ ಯತ್ನದಂತಹ ಕ್ರಿಮಿನಲ್ ಪ್ರಕರಣಗಳು ನಡೆದಿದ್ದು, ಇದೀಗ ಆರೋಪಿಗಳಾದ ಆದರ್ಶ, ಗೋವರ್ಧನ್, ಗಣೇಶ್, ಎಡ್ವರ್ಡ್ ಸೇರಿದಂತೆ 10 ಕ್ಕೂ ಮಿಕ್ಕಿ ಗಾಂಜಾ ನಶೆಯಲ್ಲಿದ್ದ ಯುವಕರ ತಂಡ ವಕ್ವಾಡಿಯಲ್ಲಿ ಮಹಿಳೆಯರನ್ನು ಅಡ್ಡಗಟ್ಟಿ ದಾಂಧಲೆ ನಡೆಸಿತ್ತು. ಬಳಿಕ ಅಲ್ಲಿಯೇ ನಿಲ್ಲಿಸಲಾಗಿದ್ದ ಆಟೋಗಳಿಗೆ ಮತ್ತು ಬೈಕುಗಳಿಗೆ ತಲವಾರ್ ಬಿಸಿ ಹಾನಿ ಉಂಟು ಮಾಡಿದ್ದರು ಎನ್ನಲಾಗಿದೆ.
ಅಲ್ಲದೆ ದುಷ್ಕರ್ಮಿಗಳು ಪಕ್ಕದಲ್ಲಿದ್ದ ಅಶೋಕ್ ದೇವಾಡಿಗ ಹಾಗೂ ಚಂದ್ರಶೇಖರ್ ಸೇರಿದಂತೆ ಐದಾರು ಜನರ ಮೇಲೆ ತಲವಾರು ಬೀಸಿ ಕೊಲೆಗೆ ಯತ್ನಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಲೋಕೇಶ್ ಅಂಕದಕಟ್ಟೆ ಹಾಗೂ ವಕ್ವಾಡಿಯ ನಿವಾಸಿಗಳು ಘಟನೆಯನ್ನು ಖಂಡಿಸಿದ್ದು ಪೊಲೀಸರು ತಪ್ಪಿತಸ್ಥರನ್ನು ಬಂಧಿಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಾಂಜಾ, ಡ್ರಗ್ಸ್ ಹಾಗೂ ಅನೈತಿಕ ಚಟುವಟಿಕೆಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕುಂದಾಪುರ ನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…