ಕುಂದಾಪುರ: ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ.
ವಕ್ವಾಡಿಯ ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣದ ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ ಪೈಕಿ ಪೊಲೀಸರು ಆದರ್ಶ (33) ಹಾಗೂ ಗೋವರ್ಧನ್ (32) ಎಂಬುವವರನ್ನು ಬಂಧಿಸಿದ್ದಾರೆ. ಗಣೇಶ್ ಕುಂಭಾಶಿ (28) ಹಾಗೂ ಎಡ್ವರ್ಡ್ (25) ಸೇರಿದಂತೆ ಇತರರು ತಲೆಮರೆಸಿಕೊಂಡಿದ್ದು ಕುಂದಾಪುರ ನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ವಕ್ವಾಡಿ, ಗೋಪಾಡಿ, ಕುಂಭಾಶಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಗಾಂಜಾ ಮತ್ತು ಡ್ರಗ್ಸ್ ಚಟುವಟಿಕೆಗಳು ನಡೆಯುತ್ತಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಹಲವಾರು ಹಲ್ಲೆ, ಮಾರಣಾಂತಿಕ ದಾಳಿ, ಕೊಲೆ ಬೆದರಿಕೆ, ಅತ್ಯಾಚಾರ ಯತ್ನದಂತಹ ಕ್ರಿಮಿನಲ್ ಪ್ರಕರಣಗಳು ನಡೆದಿದ್ದು, ಇದೀಗ ಆರೋಪಿಗಳಾದ ಆದರ್ಶ, ಗೋವರ್ಧನ್, ಗಣೇಶ್, ಎಡ್ವರ್ಡ್ ಸೇರಿದಂತೆ 10 ಕ್ಕೂ ಮಿಕ್ಕಿ ಗಾಂಜಾ ನಶೆಯಲ್ಲಿದ್ದ ಯುವಕರ ತಂಡ ವಕ್ವಾಡಿಯಲ್ಲಿ ಮಹಿಳೆಯರನ್ನು ಅಡ್ಡಗಟ್ಟಿ ದಾಂಧಲೆ ನಡೆಸಿತ್ತು. ಬಳಿಕ ಅಲ್ಲಿಯೇ ನಿಲ್ಲಿಸಲಾಗಿದ್ದ ಆಟೋಗಳಿಗೆ ಮತ್ತು ಬೈಕುಗಳಿಗೆ ತಲವಾರ್ ಬಿಸಿ ಹಾನಿ ಉಂಟು ಮಾಡಿದ್ದರು ಎನ್ನಲಾಗಿದೆ.
ಅಲ್ಲದೆ ದುಷ್ಕರ್ಮಿಗಳು ಪಕ್ಕದಲ್ಲಿದ್ದ ಅಶೋಕ್ ದೇವಾಡಿಗ ಹಾಗೂ ಚಂದ್ರಶೇಖರ್ ಸೇರಿದಂತೆ ಐದಾರು ಜನರ ಮೇಲೆ ತಲವಾರು ಬೀಸಿ ಕೊಲೆಗೆ ಯತ್ನಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಲೋಕೇಶ್ ಅಂಕದಕಟ್ಟೆ ಹಾಗೂ ವಕ್ವಾಡಿಯ ನಿವಾಸಿಗಳು ಘಟನೆಯನ್ನು ಖಂಡಿಸಿದ್ದು ಪೊಲೀಸರು ತಪ್ಪಿತಸ್ಥರನ್ನು ಬಂಧಿಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಾಂಜಾ, ಡ್ರಗ್ಸ್ ಹಾಗೂ ಅನೈತಿಕ ಚಟುವಟಿಕೆಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕುಂದಾಪುರ ನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…