Featured

ಕುಂದಾಪುರ: ತಿರುಪತಿ-ಉಡುಪಿ ನಡುವೆ ನೇರ ರೈಲು ಸೇವೆ ಆರಂಭ – vishwanews24

ಕುಂದಾಪುರ: ತಿರುಪತಿ-ಉಡುಪಿ ನಡುವೆ ನೇರ ರೈಲು ಸೇವೆ ಆರಂಭ

ಕುಂದಾಪುರ :ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ.

ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣದ ಮೂಲಕ ಮಂಗಳೂರಿಗೆ ಬರುತಿದ್ದ ಕಾಚಿಗುಡ ಮಂಗಳೂರು ವಾರಕ್ಕೆರಡು ದಿನದ ರೈಲನ್ನು ಉಡುಪಿ ಕುಂದಾಪುರದ ಮೂಲಕ ಮುರುಡೇಶ್ವರಕ್ಕೆ ವಿಸ್ತರಣೆ ಮಾಡುವ ಸಂಸದರ ಕೋರಿಕೆಯನ್ನು ಮನ್ನಿಸಿ ಭಾರತೀಯ ರೈಲ್ವೆ ವಿಸ್ತರಣೆಗೆ ಆದೇಶ ಮಾಡಿದೆ.

ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.ಕಳೆದ ಒಂದು ದಶಕದಿಂದ ಕುಂದಾಪುರ ರೈಲು ಸಮಿತಿಯು ಈ ಬಗ್ಗೆ ನಿರಂತರ ಪ್ರಯತ್ನಿಸುತಿದ್ದ ಹಿನ್ನೆಲೆಯಲ್ಲಿ ಸಂಸದನಾಗಿ ಆಯ್ಕೆಯಾದ ಮೊದಲ ನೂರು ದಿನದ ಕಾರ್ಯಕ್ರಮಗಳ ಪಟ್ಟಿಯಲ್ಲಿ ಈ ಮಹತ್ವಾಕಾಂಕ್ಷೆಯ ರೈಲು ಸೇವೆಯ ಗುರಿಯನ್ನು ಹೊಂದಿರುವುದಾಗಿ ಸಂಸದರು ತಿಳಿಸಿದ್ದರು.

ಅದರಂತೆ ಮುರುಡೇಶ್ವರದ ಮೂಲಕ ಕುಂದಾಪುರ ಉಡುಪಿ ಸುರತ್ಕಲ್ ಮೂಲ್ಕಿ ನಗರಗಳು ಕೊಯಂಬತ್ತೂರು , ತಿರುಪತಿ, ಮಂತ್ರಾಲಯ ಸಮಿಪದ ದೊನೆ ಜಂಕ್ಷನ್ ಸೇರಿದಂತೆ ಹೈದರಾಬಾದ್ ವರೆಗೆ ರೈಲು ಸಂಪರ್ಕ ಪಡೆದಿವೆ .ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಕರಾವಳಿಗೆ ಘೊಷಣೆಯಾಗು ಬೇಕು ಎನ್ನುವ ಕಾರಣಕ್ಕೆ ಸಂಸದರು ಸತತವಾಗಿ ದೆಹಲಿಯ ಅದಿಕಾರಿಗಳ ಜತೆ ಸಭೆಯ ಮೇಲೆ ಸಭೆ ನಡೆಸಿದ ಪರಿಣಾಮ ವಿಜಯದಶಮಿಯ ಪಾವನ ಸಂದರ್ಭದಲ್ಲಿ ಈ ರೈಲಿನ ವಿಸ್ತರಣೆಗೆ ಆದೇಶವು ಕರಾವಳಿಗೆ ಬಂದಿದೆ.

ಕರಾವಳಿಯ ಪ್ರತೀ ಮನೆಯಿಂದಲೂ ತಿರುಪತಿ ತೆರಳುವ ಅಸಂಖ್ಯಾತ ಭಕ್ತವರ್ಗವಿದ್ದು, ರೈಲಿನ ಅಲಭ್ಯತೆಯ ಕಾರಣದಿಂದ ಬಸ್ ಅಥವಾ ಬೆಂಗಳೂರು ತಲುಪಿ ಅಲ್ಲಿಂದ ಪ್ರಯಾಣ ಮಾಡ ಬೇಕಾದ ಪರಿಸ್ಥಿತಿಯಲ್ಲಿದ್ದರು‌.

ಸ್ವಾತಂತ್ರ್ಯದ 76 ವರ್ಷಗಳ ಬಳಿಕ ದಕ್ಷಿಣದ ಎಲ್ಲಾ ರಾಜ್ಯಗಳ ಜತೆ ಕೊಂಕಣ ರೈಲ್ವೆ ಮೂಲಕ ರೈಲು ಸಂಪರ್ಕ ಲಭೀಸಿದ್ದು, ಪುಣ್ಯಕ್ಷೇತ್ರ ತಿರುಪತಿಯನ್ನು ಉಡುಪಿ ಶ್ರೀಕೃಷ್ಣ ,ಕೊಲ್ಲೂರು ಮೂಕಾಂಬಿಕಾ ದೇಗುಲದ ಮೂಲಕ ಮುರುಡೇಶ್ವರದವರೆಗೆ ವಿವಿಧ ಪುಣ್ಯಸ್ಥಳಗಳಿಗೆ ರೈಲು ಸಿಕ್ಕಂತಾಗಿದೆ ಎಂದು ಸಂಸದ ಶ್ರೀನಿವಾಸ್ ಪೂಜಾರಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಅತ್ಯಂತ ಕ್ಷಿಪ್ರವಾಗಿ ಮನವಿಗೆ ಸ್ಪಂದಿಸಿದ ಭಾರತೀಯ ರೈಲ್ವೆಯ ಹಲವು ಅದಿಕಾರಿಗಳಿಗೆ , ರಾಜ್ಯ ಸಚಿವ ಸೋಮಣ್ಣನವರಿಗೆ ಹಾಗು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಉಡುಪಿ ಸಂಸದ ಶ್ರೀನಿವಾಸ್ ಪೂಜಾರಿ ಹ್ರತ್ಪೂರ್ವಕ ವಂದನೆಗಳನ್ನು ತಿಳಿಸಿದ್ದಾರೆ.

ತಿರುಪತಿ ಮತ್ತು ಕರಾವಳಿ ನಡುವೆ ರೈಲು ಬೇಕು ಎಂಬುದು ನಮ್ಮ ಹಲವು ದಶಕಗಳ ಪ್ರಯತ್ನ ವಾಗಿತ್ತು. ಆದರೆ ಸಂಸದ ಕೋಟ ಶ್ರಿನಿವಾಸ್ ಪೂಜಾರಿಯವರು ನಮ್ಮ ಬೇಡಿಕೆಯನ್ನು ಸಂಸದನಾದ ನೂರು ದಿನದಲ್ಲಿ ಈಡೇರಿಸುವ ಭರವಸೆ ನೀಡಿದ್ದರು ಮತ್ತು ಅದರಂತೆಯೇ ಇಂದು ತಿರುಪತಿಯ ಜತೆಗೇ ಉದ್ಯಮ ನಗರೀ ಹೈದರಾಬಾದ್ ಕೂಡ ಕರಾವಳಿಯ ಜತೆಗೆ ಬೆಸೆದಿದೆ

ವಾರಕ್ಕೊಂದು ದಿನ ಘೊಷಣೆಯಾಗ ಬೇಕಿದ್ದ ಹೊಸ ರೈಲಿನ ಬದಲು ವಾರಕ್ಕೆರಡು ದಿನದ ಕಾಚಿಗುಡ ರೈಲಿನ ವಿಸ್ತರಣೆ ಕೂಡ ಸಂಸದರ ಸಮರ್ಪಕ ನಡೆಯಾಗಿದ್ದು,ರೈಲು ಸೇವೆಗಳಲ್ಲಿ ಕ್ರಾಂತಿಕಾರ ಬದಲಾವಣೆಗೆ ಹೊರಟಿರುವ ಉಡುಪಿ ಸಂಸದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರನ್ನುರೈಲ್ವೇ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಗಣೇಶ್ ಪುತ್ರನ್ ಕರಾವಳಿಯ ರೈಲು ಪ್ರಯಾಣಿಕರ ಪರವಾಗಿ ಅಭಿನಂದಿಸುತ್ತೇ‌ನೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago