ಕುಂದಾಪುರ :ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ.
ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣದ ಮೂಲಕ ಮಂಗಳೂರಿಗೆ ಬರುತಿದ್ದ ಕಾಚಿಗುಡ ಮಂಗಳೂರು ವಾರಕ್ಕೆರಡು ದಿನದ ರೈಲನ್ನು ಉಡುಪಿ ಕುಂದಾಪುರದ ಮೂಲಕ ಮುರುಡೇಶ್ವರಕ್ಕೆ ವಿಸ್ತರಣೆ ಮಾಡುವ ಸಂಸದರ ಕೋರಿಕೆಯನ್ನು ಮನ್ನಿಸಿ ಭಾರತೀಯ ರೈಲ್ವೆ ವಿಸ್ತರಣೆಗೆ ಆದೇಶ ಮಾಡಿದೆ.
ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.ಕಳೆದ ಒಂದು ದಶಕದಿಂದ ಕುಂದಾಪುರ ರೈಲು ಸಮಿತಿಯು ಈ ಬಗ್ಗೆ ನಿರಂತರ ಪ್ರಯತ್ನಿಸುತಿದ್ದ ಹಿನ್ನೆಲೆಯಲ್ಲಿ ಸಂಸದನಾಗಿ ಆಯ್ಕೆಯಾದ ಮೊದಲ ನೂರು ದಿನದ ಕಾರ್ಯಕ್ರಮಗಳ ಪಟ್ಟಿಯಲ್ಲಿ ಈ ಮಹತ್ವಾಕಾಂಕ್ಷೆಯ ರೈಲು ಸೇವೆಯ ಗುರಿಯನ್ನು ಹೊಂದಿರುವುದಾಗಿ ಸಂಸದರು ತಿಳಿಸಿದ್ದರು.
ಅದರಂತೆ ಮುರುಡೇಶ್ವರದ ಮೂಲಕ ಕುಂದಾಪುರ ಉಡುಪಿ ಸುರತ್ಕಲ್ ಮೂಲ್ಕಿ ನಗರಗಳು ಕೊಯಂಬತ್ತೂರು , ತಿರುಪತಿ, ಮಂತ್ರಾಲಯ ಸಮಿಪದ ದೊನೆ ಜಂಕ್ಷನ್ ಸೇರಿದಂತೆ ಹೈದರಾಬಾದ್ ವರೆಗೆ ರೈಲು ಸಂಪರ್ಕ ಪಡೆದಿವೆ .ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಕರಾವಳಿಗೆ ಘೊಷಣೆಯಾಗು ಬೇಕು ಎನ್ನುವ ಕಾರಣಕ್ಕೆ ಸಂಸದರು ಸತತವಾಗಿ ದೆಹಲಿಯ ಅದಿಕಾರಿಗಳ ಜತೆ ಸಭೆಯ ಮೇಲೆ ಸಭೆ ನಡೆಸಿದ ಪರಿಣಾಮ ವಿಜಯದಶಮಿಯ ಪಾವನ ಸಂದರ್ಭದಲ್ಲಿ ಈ ರೈಲಿನ ವಿಸ್ತರಣೆಗೆ ಆದೇಶವು ಕರಾವಳಿಗೆ ಬಂದಿದೆ.
ಕರಾವಳಿಯ ಪ್ರತೀ ಮನೆಯಿಂದಲೂ ತಿರುಪತಿ ತೆರಳುವ ಅಸಂಖ್ಯಾತ ಭಕ್ತವರ್ಗವಿದ್ದು, ರೈಲಿನ ಅಲಭ್ಯತೆಯ ಕಾರಣದಿಂದ ಬಸ್ ಅಥವಾ ಬೆಂಗಳೂರು ತಲುಪಿ ಅಲ್ಲಿಂದ ಪ್ರಯಾಣ ಮಾಡ ಬೇಕಾದ ಪರಿಸ್ಥಿತಿಯಲ್ಲಿದ್ದರು.
ಸ್ವಾತಂತ್ರ್ಯದ 76 ವರ್ಷಗಳ ಬಳಿಕ ದಕ್ಷಿಣದ ಎಲ್ಲಾ ರಾಜ್ಯಗಳ ಜತೆ ಕೊಂಕಣ ರೈಲ್ವೆ ಮೂಲಕ ರೈಲು ಸಂಪರ್ಕ ಲಭೀಸಿದ್ದು, ಪುಣ್ಯಕ್ಷೇತ್ರ ತಿರುಪತಿಯನ್ನು ಉಡುಪಿ ಶ್ರೀಕೃಷ್ಣ ,ಕೊಲ್ಲೂರು ಮೂಕಾಂಬಿಕಾ ದೇಗುಲದ ಮೂಲಕ ಮುರುಡೇಶ್ವರದವರೆಗೆ ವಿವಿಧ ಪುಣ್ಯಸ್ಥಳಗಳಿಗೆ ರೈಲು ಸಿಕ್ಕಂತಾಗಿದೆ ಎಂದು ಸಂಸದ ಶ್ರೀನಿವಾಸ್ ಪೂಜಾರಿ ಹರ್ಷ ವ್ಯಕ್ತ ಪಡಿಸಿದ್ದಾರೆ.
ಅತ್ಯಂತ ಕ್ಷಿಪ್ರವಾಗಿ ಮನವಿಗೆ ಸ್ಪಂದಿಸಿದ ಭಾರತೀಯ ರೈಲ್ವೆಯ ಹಲವು ಅದಿಕಾರಿಗಳಿಗೆ , ರಾಜ್ಯ ಸಚಿವ ಸೋಮಣ್ಣನವರಿಗೆ ಹಾಗು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಉಡುಪಿ ಸಂಸದ ಶ್ರೀನಿವಾಸ್ ಪೂಜಾರಿ ಹ್ರತ್ಪೂರ್ವಕ ವಂದನೆಗಳನ್ನು ತಿಳಿಸಿದ್ದಾರೆ.
ತಿರುಪತಿ ಮತ್ತು ಕರಾವಳಿ ನಡುವೆ ರೈಲು ಬೇಕು ಎಂಬುದು ನಮ್ಮ ಹಲವು ದಶಕಗಳ ಪ್ರಯತ್ನ ವಾಗಿತ್ತು. ಆದರೆ ಸಂಸದ ಕೋಟ ಶ್ರಿನಿವಾಸ್ ಪೂಜಾರಿಯವರು ನಮ್ಮ ಬೇಡಿಕೆಯನ್ನು ಸಂಸದನಾದ ನೂರು ದಿನದಲ್ಲಿ ಈಡೇರಿಸುವ ಭರವಸೆ ನೀಡಿದ್ದರು ಮತ್ತು ಅದರಂತೆಯೇ ಇಂದು ತಿರುಪತಿಯ ಜತೆಗೇ ಉದ್ಯಮ ನಗರೀ ಹೈದರಾಬಾದ್ ಕೂಡ ಕರಾವಳಿಯ ಜತೆಗೆ ಬೆಸೆದಿದೆ
ವಾರಕ್ಕೊಂದು ದಿನ ಘೊಷಣೆಯಾಗ ಬೇಕಿದ್ದ ಹೊಸ ರೈಲಿನ ಬದಲು ವಾರಕ್ಕೆರಡು ದಿನದ ಕಾಚಿಗುಡ ರೈಲಿನ ವಿಸ್ತರಣೆ ಕೂಡ ಸಂಸದರ ಸಮರ್ಪಕ ನಡೆಯಾಗಿದ್ದು,ರೈಲು ಸೇವೆಗಳಲ್ಲಿ ಕ್ರಾಂತಿಕಾರ ಬದಲಾವಣೆಗೆ ಹೊರಟಿರುವ ಉಡುಪಿ ಸಂಸದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರನ್ನುರೈಲ್ವೇ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಗಣೇಶ್ ಪುತ್ರನ್ ಕರಾವಳಿಯ ರೈಲು ಪ್ರಯಾಣಿಕರ ಪರವಾಗಿ ಅಭಿನಂದಿಸುತ್ತೇನೆ ಎಂದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…