Featured

ಕುಂದಾಪುರ: ದೇವಸ್ಥಾನದಲ್ಲಿ ಕಳ್ಳತನವಾದ ಹಣ ಶಾಲೆಯಲ್ಲಿ ಪತ್ತೆ – vishwanews24

ಕುಂದಾಪುರ: ದೇವಸ್ಥಾನದಲ್ಲಿ ಕಳ್ಳತನವಾದ ಹಣ ಶಾಲೆಯಲ್ಲಿ ಪತ್ತೆ

ಕುಂದಾಪುರ: ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣವನ್ನು ಕದ್ದ ಕಳ್ಳ, ಅದನ್ನು ಸಮೀಪದ ಶಾಲೆಯೊಂದರಲ್ಲಿ ಬಿಟ್ಟು ಹೋಗಿರುವುದು ಸೋಮವಾರ ಸಂಜೆ ಪತ್ತೆಯಾಗಿದೆ.

ಸೋಮವಾರ ದೇಗುಲದಲ್ಲಿ ಸತ್ಯನಾರಾಯಣ ಪೂಜೆ ನಡೆದಿದ್ದು, ಹಣ ಪತ್ತೆಯಾಗಿದ್ದು ಪವಾಡ ಎಂದು ಸ್ಥಳೀಯರು ತಿಳಿಸಿದ್ದಾರೆ.

ದೇವಸ್ಥಾನದ ಅರ್ಚಕರ ಕಚೇರಿಯಿಂದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಜೊತೆಗೆ ಪಕ್ಕದ ಮೂರು ಮನೆಗಳಲ್ಲಿ ಅಲ್ಪಸ್ವಲ್ಪ ಹಣವನ್ನೂ ಕದ್ದಿದ್ದಾನೆ.

ದೇವಸ್ಥಾನದ ಸಮೀಪದಲ್ಲಿರುವ ಹೆಮ್ಮಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಶನಿವಾರವೇ ಶಾಲೆಯ ವರಾಂಡದಲ್ಲಿ ಹಸಿರು ಚೀಲವೊಂದನ್ನು ಗಮನಿಸಿದ್ದಾರೆ. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಸೋಮವಾರವೂ ಅದೇ ಸ್ಥಳದಲ್ಲಿ ಬ್ಯಾಗ್ ಬಿದ್ದಿದ್ದರಿಂದ ಕುತೂಹಲಗೊಂಡ ವಿದ್ಯಾರ್ಥಿಗಳು ಅದನ್ನು ತೆರೆದು ನೋಡಿದ್ದಾರೆ. ಈ ವೇಳೆ ಬ್ಯಾಗ್‌ನಲ್ಲಿ ಹಣ ಪತ್ತೆಯಾಗಿದೆ.

ಶಾಲೆಯ ಮುಖ್ಯ ಶಿಕ್ಷಕರು ದೇವಸ್ಥಾನದ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮಧ್ಯಾಹ್ನ ಸ್ಥಳಕ್ಕೆ ಪಿಎಸ್ ಐ ಪುಷ್ಪಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹಣ ಜಪ್ತಿ ಮಾಡಿದ್ದಾರೆ. ಬಳಿಕ ಹಣವನ್ನು ದೇವಸ್ಥಾನಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

ಕಳ್ಳ ಒಟ್ಟು 45,000 ರೂ.ನಗದನ್ನು ಕದ್ದೊಯ್ದಿದ್ದ. ಆದರೆ ಬ್ಯಾಗ್ ನಲ್ಲಿ ಕೇವಲ 3,035 ರೂ. ಹಣ ಪತ್ತೆಯಾಗಿದೆ. ಕಳ್ಳ ಉಳಿದ ಹಣವನ್ನು ಬೇರೆಡೆ ಇಟ್ಟಿರಬಹುದು ಎಂದು ಶಂಕಿಸಲಾಗಿದೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

21 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

21 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago