ಕುಂದಾಪುರ: ಗೋ ಕಳ್ಳತನಕ್ಕೆ ಯತ್ನಿಸಿ ವಿಫಲವಾದ ಘಟನೆ ಕುಂದಾಪುರದ ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ವೇಳೆಗೆ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಬದಿಯ ಬಾಗಿಲ ಮೂಲಕ ಒಳ ನುಗ್ಗಿದ್ದಾರೆ. ಬಳಿಕ 3 ಗೋಗಳ ಹಗ್ಗವನ್ನು ಕತ್ತಿಯಿಂದ ತುಂಡರಿಸಿ ಸಾಗಾಟಕ್ಕೆ ಯತ್ನಿಸಿದ್ದರು.
ಕಮಲಶಿಲೆ ದೇವಸ್ಥಾನದಲ್ಲಿ ಸೈನ್ ಇನ್ ಸೆಕ್ಯುರಿಟೀಸ್ ಸಂಸ್ಥೆಯ ಲೈವ್ ಮಾನಿಟರಿಂಗ್ ಸಿಸಿಟಿವಿ ಹಾಕಿಸಲಾಗಿದೆ. ಈ ಸಂಸ್ಥೆ 24 ತಾಸು ಸಿಸಿಟಿವಿ ಮೇಲೆ ನೇರ ನಿಗಾ ಇಟ್ಟು ಪೊಲೀಸ್ ಇಲಾಖೆಗೆ ಇಂತಹ ಕಳ್ಳತನ, ಅನುಮಾನಾಸ್ಪದ ವ್ಯಕ್ತಿಗಳ ಓಡಾಟ, ಸಂಶಯಾಸ್ಪದ ಚಟುವಟಿಕೆಗಳ ಮಾಹಿತಿಯನ್ನು ಕೂಡಲೇ ರವಾನಿಸುತ್ತದೆ. ಹೀಗೆ ಗೋ ಕಳ್ಳತನ ನಡೆಯುವ ರಾತ್ರಿ ಸೈನ್ ಇನ್ ಸಿಸಿಟಿವಿ ತಂಡ ಕಳ್ಳತನದ ಮಾಹಿತಿಯನ್ನು ಬೀಟ್ ಪೊಲೀಸ್, ಎಸ್ಐ, ದೇವಾಲಯದ ಭದ್ರತಾ ವಿಭಾಗದವರಿಗೆ ರವಾನಿಸಿದೆ.
ಭದ್ರತಾ ವಿಭಾಗ ದವರು ಕೂಡಲೇ ಗೋಶಾಲೆಗೆ ತೆರಳಿದ್ದು, ಆ ವೇಳೆಗೆ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದರು. ನಾಪತ್ತೆ ಯಾಗಿದ್ದ ಒಂದು ದನ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಉಳಿದೆಲ್ಲಾ ಗೋಗಳು ದೇವಸ್ಥಾನದಲ್ಲೇ ಸುರಕ್ಷಿತವಾಗಿದ್ದವು. ಇನ್ನು ಎಸ್ಐ ಹಾಗೂ ಕುಂದಾಪುರ ಡಿವೈಎಸ್ಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…