ಕುಂದಾಪುರ: ಭಾನುವಾರ ಬೈಂದೂರು ತಾಲೂಕಿನ ಕೊಡೆರಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಈವರೆಗೆ ಮೂವರ ಶವ ಪತ್ತೆಯಾಗಿದೆ.
ಭಾನುವಾರ ಮಧ್ಯಾಹ್ನ ಘಟನೆ ನಡೆದ ತಕ್ಷಣವೇ ನಾಪತ್ತೆಯಾದ ಮೀನುಗಾರರ ಹುಡುಕಾಟದಲ್ಲಿ ಸ್ಥಳೀಯ ಮೀನುಗಾರರು, ಕರಾವಳಿ ಕಾವಲು ಪಡೆ ಪೊಲೀಸರು ಬಹಳಷ್ಟು ಶ್ರಮಿಸಿದ್ದರು. ಸೋಮವಾರ ಬೆಳಿಗ್ಗೆ ಕಿರಿಮಂಜೇಶ್ವರ ಹೊಸಹಿತ್ಲು ಬಳಿ ಕಡಲಕಿನಾರೆಯಲ್ಲಿ ಮೀನುಗಾರ ನಾಗ ಎನ್ನುವರ ಮೃತದೇಹ ಪತ್ತೆಯಾಗಿತ್ತು. ಸೋಮವಾರ ಮಧ್ಯಾಹ್ನದ ಬಳಿಕ ಮಂಗಳೂರಿನಿಂದ ಕೋಸ್ಟ್ ಗಾರ್ಡ್ ಬೋಟ್ ಆಗಮಿಸಿ ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದರು. ಸೋಮವಾರ ರಾತ್ರಿ ವೇಳೆ ಎರಡು ಶವಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದ್ದು ಶೇಖರ್ ಖಾರ್ವಿ ಹಾಗೂ ಲಕ್ಷ್ಮಣ ಖಾರ್ವಿ ಅವರ ಮೃತದೇಹ ಎನ್ನಲಾಗಿದೆ.
ಇನ್ನು ನಾಪತ್ತೆಯಾದ ನಾಲ್ವರ ಪೈಕಿ ಮೂವರು ಶವವಾಗಿ ಪತ್ತೆಯಾದರೆ ಮಂಜುನಾಥ್ ಖಾರ್ವಿಗಾಗಿ ಹುಡುಕಾಟ ಮುಂದುವರಿಯಲಿದೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…