ಕುಂದಾಪುರ: ಭಾನುವಾರ ಬೈಂದೂರು ತಾಲೂಕಿನ ಕೊಡೆರಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಈವರೆಗೆ ಮೂವರ ಶವ ಪತ್ತೆಯಾಗಿದೆ.
ಭಾನುವಾರ ಮಧ್ಯಾಹ್ನ ಘಟನೆ ನಡೆದ ತಕ್ಷಣವೇ ನಾಪತ್ತೆಯಾದ ಮೀನುಗಾರರ ಹುಡುಕಾಟದಲ್ಲಿ ಸ್ಥಳೀಯ ಮೀನುಗಾರರು, ಕರಾವಳಿ ಕಾವಲು ಪಡೆ ಪೊಲೀಸರು ಬಹಳಷ್ಟು ಶ್ರಮಿಸಿದ್ದರು. ಸೋಮವಾರ ಬೆಳಿಗ್ಗೆ ಕಿರಿಮಂಜೇಶ್ವರ ಹೊಸಹಿತ್ಲು ಬಳಿ ಕಡಲಕಿನಾರೆಯಲ್ಲಿ ಮೀನುಗಾರ ನಾಗ ಎನ್ನುವರ ಮೃತದೇಹ ಪತ್ತೆಯಾಗಿತ್ತು. ಸೋಮವಾರ ಮಧ್ಯಾಹ್ನದ ಬಳಿಕ ಮಂಗಳೂರಿನಿಂದ ಕೋಸ್ಟ್ ಗಾರ್ಡ್ ಬೋಟ್ ಆಗಮಿಸಿ ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದರು. ಸೋಮವಾರ ರಾತ್ರಿ ವೇಳೆ ಎರಡು ಶವಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದ್ದು ಶೇಖರ್ ಖಾರ್ವಿ ಹಾಗೂ ಲಕ್ಷ್ಮಣ ಖಾರ್ವಿ ಅವರ ಮೃತದೇಹ ಎನ್ನಲಾಗಿದೆ.
ಇನ್ನು ನಾಪತ್ತೆಯಾದ ನಾಲ್ವರ ಪೈಕಿ ಮೂವರು ಶವವಾಗಿ ಪತ್ತೆಯಾದರೆ ಮಂಜುನಾಥ್ ಖಾರ್ವಿಗಾಗಿ ಹುಡುಕಾಟ ಮುಂದುವರಿಯಲಿದೆ
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…