Featured

ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ – Vishwanews24

ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ

ಕುಂದಾಪುರ: ಹಿಂದುತ್ವಕ್ಕಾಗಿ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿ, ತನ್ನ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ, ಧೀಮಂತ ನಾಯಕ ಎನಿಸಿಕೊಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಬಿಜೆಪಿ ದ.ಕ ಲೋಕಸಭಾ ಟಿಕೆಟ್ ನೀಡಬೇಕು ಎಂದು ಸಂಘ ಪರಿವಾರದ ಹಿರಿಯ ಮುಖಂಡ ಅಚ್ಯುತ್ ಕಲ್ಮಾಡಿ ಆಗ್ರಹಿಸಿದ್ದಾರೆ.

ಬಿಜೆಪಿ ಪಕ್ಷದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಅವರನ್ನು ಆಯ್ಕೆ ಮಾಡಲು ಒತ್ತಾಯಿಸಿ ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಕುಂದಾಪುರ ತಾಲೂಕು ವತಿಯಿಂದ ತಾಲೂಕು ಪಂಚಾಯತ್ ಎದುರು ರವಿವಾರ ನಡೆದ ಆಗ್ರಹ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಕುಲಗೆಟ್ಟಿರುವ, ಸ್ವಾರ್ಥ ತುಂಬಿರುವ ರಾಜಕೀಯ ವ್ಯವಸ್ಥೆಯಿದೆ. ರಾಜಕೀಯದಲ್ಲಿ ಹಿಂದುತ್ವದ ಕಡೆಗೆ ಗಮನಹರಿ ಸುವ ವ್ಯಕ್ತಿ ಆರಿಸಿ ಬರಬೇಕಿದೆ. ಸಮರ್ಪಣಾ ಮನೋಭಾವನೆಯಿಂದ ತನ್ನನ್ನು ಹಿಂದುತ್ವಕ್ಕಾಗಿ ಸಮರ್ಪಿಸಿಕೊಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಬೇರೆ ಬೇರೆ ಪಕ್ಷಗಳು ಟಿಕೆಟ್ ನೀಡಲು ಮುಂದೆ ಬಂದಿದ್ದರೂ ಅದನ್ನು ತಿರಸ್ಕರಿಸಿ ಬದ್ಧತೆ ತೋರಿದ್ದಾರೆ ಎಂದವರು ನುಡಿದರು.

ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಕುಂದಾಪುರದ ಪ್ರಮುಖರಾದ ಧನಂಜಯ್ ಕುಂದಾಪುರ ಮಾತನಾಡಿ, ಸತ್ಯಜಿತ್ ಸುರತ್ಕಲ್ ಅವರಿಗೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ಆಗ್ರಹಿಸಿ ಫೆ.25ರಂದು ಬಂಟ್ವಾಳದ ಬಂಟರ ಭವನದಲ್ಲಿ ರಾಜ್ಯಮಟ್ಟದ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಕುಂದಾಪುರದ ಪ್ರಮುಖರಾದ ಗಣೇಶ್ ಹೆಗ್ಡೆ ಕುಂದಾಪುರ, ಭಾಸ್ಕರ ಶೆಟ್ಟಿ ಸಿದ್ದಾಪುರ, ರಾಜೇಶ್ ಕೋಟೇಶ್ವರ ವೇದಿಕೆಯಲ್ಲಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago