Featured

ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ – Vishwanews24

ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ

ಕುಂದಾಪುರ: ಹಿಂದುತ್ವಕ್ಕಾಗಿ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿ, ತನ್ನ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ, ಧೀಮಂತ ನಾಯಕ ಎನಿಸಿಕೊಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಬಿಜೆಪಿ ದ.ಕ ಲೋಕಸಭಾ ಟಿಕೆಟ್ ನೀಡಬೇಕು ಎಂದು ಸಂಘ ಪರಿವಾರದ ಹಿರಿಯ ಮುಖಂಡ ಅಚ್ಯುತ್ ಕಲ್ಮಾಡಿ ಆಗ್ರಹಿಸಿದ್ದಾರೆ.

ಬಿಜೆಪಿ ಪಕ್ಷದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಅವರನ್ನು ಆಯ್ಕೆ ಮಾಡಲು ಒತ್ತಾಯಿಸಿ ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಕುಂದಾಪುರ ತಾಲೂಕು ವತಿಯಿಂದ ತಾಲೂಕು ಪಂಚಾಯತ್ ಎದುರು ರವಿವಾರ ನಡೆದ ಆಗ್ರಹ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಕುಲಗೆಟ್ಟಿರುವ, ಸ್ವಾರ್ಥ ತುಂಬಿರುವ ರಾಜಕೀಯ ವ್ಯವಸ್ಥೆಯಿದೆ. ರಾಜಕೀಯದಲ್ಲಿ ಹಿಂದುತ್ವದ ಕಡೆಗೆ ಗಮನಹರಿ ಸುವ ವ್ಯಕ್ತಿ ಆರಿಸಿ ಬರಬೇಕಿದೆ. ಸಮರ್ಪಣಾ ಮನೋಭಾವನೆಯಿಂದ ತನ್ನನ್ನು ಹಿಂದುತ್ವಕ್ಕಾಗಿ ಸಮರ್ಪಿಸಿಕೊಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಬೇರೆ ಬೇರೆ ಪಕ್ಷಗಳು ಟಿಕೆಟ್ ನೀಡಲು ಮುಂದೆ ಬಂದಿದ್ದರೂ ಅದನ್ನು ತಿರಸ್ಕರಿಸಿ ಬದ್ಧತೆ ತೋರಿದ್ದಾರೆ ಎಂದವರು ನುಡಿದರು.

ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಕುಂದಾಪುರದ ಪ್ರಮುಖರಾದ ಧನಂಜಯ್ ಕುಂದಾಪುರ ಮಾತನಾಡಿ, ಸತ್ಯಜಿತ್ ಸುರತ್ಕಲ್ ಅವರಿಗೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ಆಗ್ರಹಿಸಿ ಫೆ.25ರಂದು ಬಂಟ್ವಾಳದ ಬಂಟರ ಭವನದಲ್ಲಿ ರಾಜ್ಯಮಟ್ಟದ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಕುಂದಾಪುರದ ಪ್ರಮುಖರಾದ ಗಣೇಶ್ ಹೆಗ್ಡೆ ಕುಂದಾಪುರ, ಭಾಸ್ಕರ ಶೆಟ್ಟಿ ಸಿದ್ದಾಪುರ, ರಾಜೇಶ್ ಕೋಟೇಶ್ವರ ವೇದಿಕೆಯಲ್ಲಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago